Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋದ್ರಾ' ಚಿತ್ರಕ್ಕೆ ಚಾಲನೆ ಕೊಟ್ಟ ಸ್ಯಾಂಡಲ್ ವುಡ್ ಕಿಂಗ್
ಸತೀಶ್ ನೀನಾಸಂ ಮತ್ತು ಶ್ರದ್ಧಾ ಶ್ರೀನಾಥ್ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಚಾಲನೆ ಕೊಟ್ಟಿದ್ದಾರೆ. ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಶಿವಣ್ಣ ಚಿತ್ರತಂಡಕ್ಕೆ ಶುಭ ಕೋರಿದರು.
ಇದೇ ಮೊದಲ ಬಾರಿಗೆ ಸತೀಶ್ ಹಾಗೂ ಶ್ರದ್ಧಾ ಶ್ರೀನಾಥ್ ಒಟ್ಟಿಗೆ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಹೆಸರು 'ಗೋದ್ರಾ'. 'ಗೋದ್ರಾ' ಎಂದಾಕ್ಷಣ 2002ರಲ್ಲಿ ನಡೆದ ಗುಜರಾತ್ ನಲ್ಲಿ 'ಗೋದ್ರಾ ಹತ್ಯಾಕಾಂಡ' ಕುರಿತ ಸಿನಿಮಾನಾ ಎಂಬ ಪ್ರಶ್ನೆ ಕಾಡುವುದು ಸಹಜ. ಆದ್ರೆ, ಆ 'ಗೋದ್ರಾ ಹತ್ಯಾಕಾಂಡ'ಕ್ಕೂ ಮತ್ತು ಸತೀಶ್ ಅಭಿನಯಿಸುತ್ತಿರುವ ಈ 'ಗೋದ್ರಾ' ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ.
ಇದೊಂದು ನವಿರಾದ ಪ್ರೇಮಕಥೆಯಾಗಿದ್ದು, ಈ ಚಿತ್ರದಲ್ಲಿ ಸತೀಶ್ ಎರಡು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 35 ವರ್ಷದ ವಯಸ್ಕ ಮತ್ತು 20 ವರ್ಷದ ಯುವಕನ ಪಾತ್ರದಲ್ಲಿ ಮಿಂಚಲಿದ್ದಾರೆ. ಇದಕ್ಕಾಗಿ ಸುಮಾರು 3 ತಿಂಗಳು ಗಡ್ಡ ಬಿಟ್ಟು ತಯಾರಿ ಆಗಿದ್ದಾರೆ ಸತೀಶ್ ನೀನಾಸಂ.
ಇನ್ನು ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಂದೀಶ್ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ, ಸರಳವಾಗಿ ಸಿನಿಮಾ ಮುಹೂರ್ತ ಮಾಡಿಕೊಂಡಿರುವ ಗೋದ್ರಾ ಚಿತ್ರತಂಡ, ಆಗಸ್ಟ್ 25 ರಿಂದ ಚಿತ್ರೀಕರಣ ಆರಂಭಿಸುವ ಯೋಚನೆಯಲ್ಲಿದೆ.