Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ವುಡ್ನಲ್ಲಿ 'ಅಬ್ಬರ' ಶುರು ಮಾಡಿದ ಡೈನಾಮಿಕ್ ಪ್ರಿನ್ಸ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸ್ಯಾಂಡಲ್ವುಡ್ ಇಂಡಸ್ಟ್ರಿಯಲ್ಲಿ 'ಅಬ್ಬರ' ಶುರು ಮಾಡಿದ್ದಾರೆ. ಹೌದು, ಪ್ರಜ್ವಲ್ ನಟನೆಯ ಹೊಸ ಚಿತ್ರ ಆರಂಭವಾಗಿದ್ದು, ಈ ಚಿತ್ರಕ್ಕೆ 'ಅಬ್ಬರ' ಎಂದು ಹೆಸರಿಡಲಾಗಿದೆ.
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಪ್ರಜ್ವಲ್ ನಟನೆಯ ಹೊಸ ಚಿತ್ರದ ಟೈಟಲ್ ಅನಾವರಣ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್ ಮೂರು ವಿಭಿನ್ನ ಶೇಡ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹ್ಯಾಟ್ರಿಕ್ ಹೀರೋ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ಪ್ರಜ್ವಲ್ ದೇವರಾಜ್ ಹೊಸ ಸಿನಿಮಾ ಶೀರ್ಷಿಕೆ ಬಿಡುಗಡೆ ಮಾಡಲಿದ್ದಾರೆ ಶಿವಣ್ಣ
ಪ್ರಜ್ವಲ್ ದೇವರಾಜ್ ಸದ್ಯ 'ಇನ್ಸ್ಪೆಕ್ಟರ್ ವಿಕ್ರಂ' ಸಿನಿಮಾ ಮಾಡ್ತಿದ್ದು, ಅದರ ಜೊತೆಗೆ 'ಅರ್ಜುನ್ ಗೌಡ' ಹಾಗೂ 'ವೀರಂ' ಎಂಬ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಅಂದ್ಹಾಗೆ, ಅಬ್ಬರ ಚಿತ್ರಕ್ಕೆ ನಿರ್ದೇಶಕ ಕೆ ರಾಮ್ ನಾರಾಯಣ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ನಿರ್ದೇಶಕ ರಾಮ್ ನಾರಾಯಣ್ ಕುರಿತು ಹೇಳಬೇಕಾದರೆ, ಪ್ರಭಾಕರ್ ಮಗ ವಿನೋದ್ ಪ್ರಭಾಕರ್ ಜೊತೆ 'ಟೈಸನ್' ಮತ್ತು 'ಕ್ರ್ಯಾಕ್' ಎಂಬ ಎರಡು ಚಿತ್ರ ಮಾಡಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ ಕೊನೆ ಸಿನಿಮಾ 'ರಾಜಮಾರ್ತಂಡ' ಚಿತ್ರಕ್ಕೂ ಇವರೇ ಆಕ್ಷನ್ ಕಟ್ ಹೇಳಿದ್ದಾರೆ.
Recommended Video
ಸದ್ಯ ಲಾಕ್ಡೌನ್ನಿಂದ ಬ್ರೇಕ್ ತೆಗೆದುಕೊಂಡಿರುವ ಡೈನಾಮಿಕ್ ಪ್ರಿನ್ಸ್ ಇತ್ತೀಚಿಗಷ್ಟೆ ಡಿ ಬಾಸ್ ದರ್ಶನ್ ಜೊತೆ ಬೈಕ್ ರೈಡ್ ಹೋಗಿದ್ದರು. ಬೆಂಗಳೂರಿನಿಂದ ಮಡಿಕೇರಿವರೆಗೂ ಬೈಕ್ಗಳಲ್ಲಿ ಸವಾರಿ ಮಾಡಿ ಸ್ನೇಹಿತರ ಜೊತೆ ಎಂಜಾಯ್ ಮಾಡಿದ್ದರು.