Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅವನೇ ಶ್ರೀಮನ್ನಾರಾಯಣ' ನಿರ್ದೇಶಕನ ಜೊತೆ ಶಿವಣ್ಣನ ಹೊಸ ಸಿನಿಮಾ
ಭಜರಂಗಿ-2 ಚಿತ್ರೀಕರಣದಲ್ಲಿ ಬ್ಯುಸಿಯಿರುವ ನಟ ಶಿವರಾಜ್ ಕುಮಾರ್ ತಮ್ಮ ಮುಂದಿನ ಚಿತ್ರವನ್ನು ಯುವ ನಿರ್ದೇಶಕನ ಜೊತೆ ಮಾಡುತ್ತಿದ್ದಾರೆ.
Recommended Video
ರಕ್ಷಿತ್ ಶೆಟ್ಟಿ ನಟನೆ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ನಿರ್ದೇಶಿಸಿದ್ದ ಸಚಿನ್ ರವಿ ಹ್ಯಾಟ್ಯಿಕ್ ಹೀರೋಗೆ ಆಕ್ಷನ್ ಕಟ್ ಹೇಳುವ ಅವಕಾಶ ಪಡೆದುಕೊಂಡಿದ್ದಾರೆ. ಈ ಕುರಿತು ಸ್ವತಃ ಸಚಿನ್ ಅವರೇ ತಮ್ಮ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ.
ಅಣ್ಣಾವ್ರ ಮೊಮ್ಮಗನ ಭರ್ಜರಿ ಎಂಟ್ರಿ: 'ಯುವ ರಣಧೀರ ಕಂಠೀರವ' ಟೀಸರ್
''ಇವರ ಸಿನಿಮಾ ನೋಡಿ ಕನಸುಗಳನ್ನು ಕಟ್ಟುತ್ತಿದ್ದೆವು...ಈಗ ಇವರ ಜೊತೆಯಲ್ಲೆ ನಮ್ಮ ಕನಸು ನನಸಾಗುವ ಸಮಯ... ಮಹಾನ್ ಕಲಾವಿದ ಶಿವರಾಜ್ ಕುಮಾರ್ ಅವರ ಜೊತೆ ನನ್ನ ನಿರ್ದೇಶನದ ಮುಂದಿನ ಸಿನಿಮಾ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಿಮ್ಮ ಶುಭಹಾರೈಕೆ ನಮ್ಮ ಜೊತೆಗಿರಲಿ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು'' ಎಂದು ಟ್ವೀಟ್ ಮಾಡಿದ್ದಾರೆ.
ಮಹಾಭಾರತದಲ್ಲಿ ಅಶ್ವತ್ಥಾಮ ಬಹಳ ಪ್ರಧಾನವಾಗಿದ್ದು, ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಅಶ್ವತ್ಥಾಮನನ್ನು ಹೋಲುವಂತಹ ಪಾತ್ರ ನಿರ್ವಹಿಸಲಿದ್ದಾರೆ.
ಸಚಿನ್ ಮತ್ತು ಶಿವಣ್ಣ ಕಾಂಬಿನೇಷನ್ನಲ್ಲಿ ತಯಾರಾಗಲಿರುವ ಚಿತ್ರಕ್ಕೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಂಡವಾಳ ಹಾಕುತ್ತಿದ್ದಾರೆ. ಸದ್ಯಕ್ಕೆ ಸಿನಿಮಾ ಮಾತ್ರ ಘೋಷಣೆ ಮಾಡಿರುವ ನಿರ್ದೇಶಕರು ಶೂಟಿಂಗ್ ಹಾಗೂ ಇನ್ನಿತರ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.
ಭಜರಂಗಿ-2 ಸಿನಿಮಾ ಬಳಿಕ ಈಗಾಗಲೇ ಶಿವಣ್ಣ 'ಆರ್ಡಿಎಕ್ಸ್' ಮತ್ತು 'ಬೈರತಿ ರಣಗಲ್ಲು' ಎಂಬ ಪ್ರಾಜೆಕ್ಟ್ಗಳಿಗೆ ಕಾಲ್ಶೀಟ್ ಕೊಟ್ಟಿದ್ದಾರೆ. ಬಹುಶಃ ಈ ಸಿನಿಮಾ ನಂತರ ಸಚಿನ್ ಅವರ ಚಿತ್ರ ಕೈಗೆತ್ತಿಕೊಳ್ಳಬಹುದು.