Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕುಮಾರ್ ಜನ್ಮದಿನ: ವಿಶೇಷ ಪೂಜೆ ಮೂಲಕ ಅಪ್ಪಾಜಿ ನೆನೆದ ಶಿವಣ್ಣ
ಡಾ.ರಾಜ್ ಕುಮಾರ್ ಅವರ 92ನೇ ಜನ್ಮದಿನದ ಸಂಭ್ರಮ. ಅಭಿಮಾನಿಗಳು ಮತ್ತು ಸಿನಿಮಾ ಗಣ್ಯರು ವರನಟನ ಸ್ಮರಣೆ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಇಂದು ಮತ್ತು ನಾಳೆ ಕರ್ಫ್ಯೂ ಜಾರಿಯಲ್ಲಿರುವ ಕಾರಣ ಈ ವರ್ಷವೂ ಅದ್ದೂರಿಯಾಗಿ ಅಣ್ಣಾವ್ರ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ.
Recommended Video
ಅನೇಕರು ಮನೆಯಲ್ಲೇ ಡಾ.ರಾಜ್ ಕುಮಾರ್ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇನ್ನು ಡಾ.ರಾಜ್ ಕುಮಾರ್ ಮಕ್ಕಳು ಸಹ ವಿಶೇಷ ಪೂಜೆಯ ಮೂಲಕ ಅಪ್ಪಾಜಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಸದ್ಯ ಕನಕಪುರದಲ್ಲಿ ಬೀಡುಬಿಟ್ಟಿದ್ದಾರೆ.
ಕೊರೊನಾ ಜಾಗೃತಿಗೆ ಅಣ್ಣಾವ್ರ ಹಾಡು ಬಳಸಿದ ವೈದ್ಯಕೀಯ ವಿದ್ಯಾರ್ಥಿಗಳು
ಅಲ್ಲಿಯೇ ವಿಶೇಷ ಪೂಜೆ ಮೂಲಕ ಶಿವಣ್ಣ ಅಪ್ಪಾಜಿಯನ್ನು ನೆನೆದಿದ್ದಾರೆ. ಕನಕಪುರ ಫಾರ್ಮ್ ಹೌಸ್ ನಲ್ಲಿರುವ ಶಿವಣ್ಣ ಅಲ್ಲೇ ಗದ್ದೆಯಲ್ಲಿ ಅಪ್ಪಾಜಿಯ ಫೋಟೋವಿಟ್ಟು, ಹೂವಿನ ಹಾರಹಾಕಿ ಪೂಜೆ ಮಾಡಿದ್ದಾರೆ. ಫೂಜೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಇನ್ನು ಇಂದು ಬೆಳಗ್ಗೆ ರಾಘವೇಂದ್ರ ರಾಜ್ ಕುಮಾರ್ ಅಪ್ಪಾಜಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕರ್ಫ್ಯೂ ಕಾರಣ ಬೆಳ್ಳಂಬೆಳಗ್ಗೆ ಕಂಠೀರವ ಸ್ಟುಡಿಯೋಗೆ ತೆರಳಿದ್ದ ರಾಘವೇಂದ್ರ ರಾಜ್ ಕುಮಾರ್ ಸಮಾಧಿಗೆ ವಿಶೇಷ ಪೂಜೆ ಮಾಡಿದ್ದಾರೆ. ಇನ್ನು ಪವರ್ ಸ್ಟಾರ್ ಪುನೀತ್ ರಾಜ ಕುಮಾರ್ ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನೆದಿದ್ದಾರೆ.