Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
James Movie: 'ಜೇಮ್ಸ್' ಸಿನಿಮಾದಲ್ಲಿ ಶಿವಣ್ಣ, ರಾಘವೇಂದ್ರ ರಾಜ್ಕುಮಾರ್ ಪಾತ್ರವೇನು?
ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಮೂವರು ಒಂದೇ ಸಿನಿಮಾದಲ್ಲಿ ನಟಿಸಬೇಕು ಎಂಬುದು ದೊಡ್ಮನೆ ಅಭಿಮಾನಿಗಳ ಬಹುಕಾಲದ ಆಸೆ. ಆದರೆ ಆ ಆಸೆ ಈಡೇರಲೇ ಇಲ್ಲ.
Recommended Video
ಪುನೀತ್ ರಾಜ್ಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಅಭಿನಯಿಸಿದ್ದಾರೆ. ಆದರೆ ಮೂವರು ಅಣ್ಣ-ತಮ್ಮಂದಿರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಂಡಿಲ್ಲ.
James Movie Review: ಸ್ನೇಹದ ಸಂದೇಶ ಸಾರುವ ಕತೆಯಲ್ಲಿ ಅಪ್ಪು ಒನ್ಮ್ಯಾನ್ ಶೋ
'ಜೇಮ್ಸ್' ಸಿನಿಮಾದಲ್ಲಿ ಇಂಟರ್ವೆಲ್ ಬಳಿಕ ಶಿವಣ್ಣ ಹಾಗೂ ರಾಘಣ್ಣ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿಯೂ ಶಿವರಾಜ್ ಕುಮಾರ್ ತೆರೆಯ ಮೇಲೆ ಕಾಣಿಸಿಕೊಂಡಾಗ ಶಿಳ್ಳೆ, ಚಪ್ಪಾಳೆಗಳ ಭೋರ್ಗರೆತವೇ ಆಗುತ್ತದೆ.
'ಜೇಮ್ಸ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸೈನ್ಯಾಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಪಿರಂಗಿ ಪಾತ್ರಧಾರಿ ರಂಗಾಯಣ ರಘು, ಸಂತೋಶ್ ಪಾತ್ರಧಾರಿ ಪುನೀತ್ ಅವರನ್ನು ಅವರ ಕುಟುಂಬದ ಬಗ್ಗೆ ಕೇಳುತ್ತಾರೆ. ಆಗ ಫ್ಲಾಶ್ಬ್ಯಾಕ್ ದೃಶ್ಯ ತೆರೆದುಕೊಳ್ಳುತ್ತದೆ. ಜೋರು ಮಳೆಯಿಂದ ಆದ ಅತಿವೃಷ್ಟಿಯಲ್ಲಿ ಸಂತೋಶ್ (ಪುನೀತ್) ಹಾಗೂ ಇನ್ನು ಕೆಲವು ಬಾಲಕರು ತಮ್ಮ ಪೋಷಕರನ್ನು ಕಳೆದುಕೊಂಡಿರುತ್ತಾರೆ. ಎಲ್ಲರೂ ಗಂಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿರುತ್ತಾರೆ. ಅತಿವೃಷ್ಟಿಯಲ್ಲಿ ಸಿಲುಕಿದವರಿಗೆ ನೆರವಾಗುವ ಸೈನ್ಯದ ಗುಂಪಿನ ಮುಖ್ಯಸ್ಥನ ಪಾತ್ರದಲ್ಲಿ ನಟಿಸಿರುವ ಶಿವರಾಜ್ ಕುಮಾರ್ ಅದೇ ಗಂಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿರುತ್ತಾರೆ.
James Twitter Review : ಅಪ್ಪು ಕೊನೆ ಸಿನಿಮಾ 'ಜೇಮ್ಸ್' ಚಿತ್ರದ ಟ್ವಿಟ್ಟರ್ ವಿಮರ್ಶೆ!
ಶಿವಣ್ಣ ಆ ಮಕ್ಕಳನ್ನು ಕರೆದು ಕೂರಿಸಿಕೊಂಡು ಜೀವನ ಪಾಠ ಹೇಳುತ್ತಾರೆ. '''ಯಾರ ಮೇಲೆ ಪ್ರೀತಿ ಹೆಚ್ಚು ಇರುತ್ತೊ ಅವರನ್ನು ಆ ದೇವರು ಬೇಗ ಕರೆದುಕೊಂಡು ಬಿಡುತ್ತಾರೆ'' ಎಂದು ಸಂಭಾಷಣೆ ಹೇಳುವ ಶಿವಣ್ಣ ಅರೆ ಕ್ಷಣ ಆಕಾಶ ನೋಡುತ್ತಾರೆ. ಆ ದೃಶ್ಯ ಪ್ರೇಕ್ಷಕನ ಹೃದಯ ಕರಗಿಸಿಬಿಡುತ್ತದೆ.
ಪೋಷಕರನ್ನು ಕಳೆದುಕೊಂಡ ಎಲ್ಲ ಹುಡುಗರನ್ನು ಆಶ್ರಮವೊಂದಕ್ಕೆ ಶಿವಣ್ಣ ಸೇರಿಸುತ್ತಾರೆ. ಆ ಆಶ್ರಮದ ಮುಖ್ಯ ಗುರುವಿನ ಪಾತ್ರದಲ್ಲಿ ರಾಘವೇಂದ್ರ ರಾಜ್ಕುಮಾರ್ ನಟಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅವರಿಗೆ ಸಿನಿಮಾದಲ್ಲಿ ಹೆಚ್ಚಿನ ಸಂಭಾಷಣೆಗಳಿಲ್ಲ.
'ಜೇಮ್ಸ್' ಸಿನಿಮಾ ಶೂಟಿಂಗ್ ಮಾಡುವಾಗ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಪಾತ್ರ ಇರಲಿಲ್ಲ. ಆದರೆ ಪುನೀತ್ ಕಾಲವಾದ ಬಳಿಕ ಇವರಿಬ್ಬರ ಪಾತ್ರಗಳನ್ನು ಸೃಷ್ಟಿಸಿ ಕತೆಗೆ ಹೊಂದಿಕೊಳ್ಳುವಂತೆ ಜಾಣತನದಿಂದ ಬಳಸಿಕೊಂಡಿದ್ದಾರೆ ನಿರ್ದೇಶಕ ಚೇತನ್.