Don't Miss!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆದರುವ ಅವಶ್ಯಕತೆ ಇಲ್ಲ': ಇಂಡಸ್ಟ್ರಿ ಮೇಲಿನ ಡ್ರಗ್ಸ್ ಆರೋಪದ ಬಗ್ಗೆ ಶಿವಣ್ಣ ಹೇಳಿದ್ದೇನು?
ಸ್ಯಾಂಡಲ್ವುಡ್ ನಟ-ನಟಿಯರು ಹಾಗೂ ತಂತ್ರಜ್ಞರು ಡ್ರಗ್ಸ್ ಮಾಫಿಯಾದಲ್ಲಿದ್ದಾರೆ. ಡ್ರಗ್ಸ್ ಸೇವಿಸುತ್ತಾರೆ, ಡ್ರಗ್ಸ್ ಡೀಲರ್ಗಳ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ, ಅನುಮಾನಗಳು ಹುಟ್ಟಿಕೊಂಡಿದೆ.
Recommended Video
ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ಇದೆ, ಡ್ರಗ್ಸ್ ಸೇವಿಸುವವರ ವಿವರ ಸಹ ನನ್ನ ಬಳಿ ಇದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದು ಸ್ಯಾಂಡಲ್ವುಡ್ ಇಂಡಸ್ಟ್ರಿಗೆ ಮತ್ತಷ್ಟು ಆಘಾತ ತಂದಿದೆ. ಇಂದ್ರಜಿತ್ ಲಂಕೇಶ್ ಅವರ ಆರೋಪಗಳಿಗೆ ಪರ-ವಿರೋಧದ ಚರ್ಚೆ ಆರಂಭವಾಗಿದ್ದು, ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಯಾವುದು ವಿಪರೀತವಾಗಬಾರದು
''ಒಳ್ಳೆಯದು ಇರುತ್ತೆ, ಕೆಟ್ಟದ್ದು ಇರುತ್ತೆ. ಯಾವುದನ್ನು ತೆಗೆದುಕೊಳ್ಳಬೇಕು ಎಂಬ ಅರಿವು ನಮಗಿರಬೇಕು. ಡ್ರಗ್ಸ್, ನಶೆ ಇನ್ನೊಂದು, ಮತ್ತೊಂದು ಎಲ್ಲವೂ ಇದೆ, ಇರುತ್ತೆ. ಆದರೆ ಆ ಬಗ್ಗೆ ನಾವು ಗಮನ ಕೊಡಬಾರದು. ಫನ್ಗೋಸ್ಕರ ತೆಗೆದುಕೊಂಡರೂ ಅದು ವಿಪರೀತವಾಗಬಾರದು. ಸಮಾಜಕ್ಕೆ ನಾವು ಮಾದರಿಯಾಗಬೇಕು'' - ಶಿವರಾಜ್ ಕುಮಾರ್
ಡ್ರಗ್ಸ್ ಬಗ್ಗೆ ಕೇಳುತ್ತಿದ್ದಂತೆ ಉರಿದುಬಿದ್ದ ನಟಿ ರಚಿತಾ ರಾಮ್
ನಮ್ಮ ಇಂಡಸ್ಟ್ರಿಯಲ್ಲಿ ಕಂಡಿಲ್ಲ
''ಇಂಡಸ್ಟ್ರಿಯಲ್ಲಿ ಡ್ರಗ್ಸ್ ಇದೆ ಇಲ್ಲ ಅನ್ನೋದನ್ನು ನಾವು ಹೇಳುವುದಕ್ಕೆ ಆಗಲ್ಲ, ನಾನೇನು ಪೊಲೀಸ್ ಅಲ್ಲ. ಆದರೆ, ನಾನು ಶೂಟಿಂಗ್ ಮಾಡಿದ ಚಿತ್ರಗಳು, ಅಲ್ಲಿ ಕೆಲಸ ಮಾಡುವ ಎಲ್ಲರೂ ಕೆಲಸದ ಬಗ್ಗೆ ಮಾತ್ರ ಗಮನ ಕೊಟ್ಟಿದ್ದಾರೆ. ಇದುವರೆಗೂ ನಾನು ನೋಡಿದಂತೆ ನಮ್ಮ ಇಂಡಸ್ಟ್ರಿಯಲ್ಲಿ ಕಂಡಿಲ್ಲ. ಈ ಸುದ್ದಿಗಳು ನೋಡಿದ್ಮೇಲೆ ನನಗೆ ತಿಳಿಯುತ್ತಿದೆ'' - ಶಿವರಾಜ್ ಕುಮಾರ್
ಯಾರಿಗೂ ಹೆದರುವ ಅವಶ್ಯಕತೆ ಇಲ್ಲ
'ಇಂಡಸ್ಟ್ರಿಯಲ್ಲಿ ಇದೆ ಅಂದ್ಮೇಲೆ ಹೆದರಿಕೊಳ್ಳುವುದರಲ್ಲಿ ಏನಿದೆ. ಸತ್ಯ ಹೊರಗೆ ಬರಬೇಕು. ಮಾಧ್ಯಮಗಳಲ್ಲಿ ಹೆಸರುಗಳನ್ನು ಹೇಳಬಹುದಾಗಿತ್ತು ಅಲ್ಲವೇ? ಎಂದು ಪರೋಕ್ಷವಾಗಿ ನಿರ್ದೇಶಕ ಇಂದ್ರಜಿತ್ ಲೋಕೇಶ್ ಗೆ ಹೇಳಿದ್ದಾರೆ.
ತಲೇಲಿ ಕೂದಲಿಲ್ಲ, ಬುದ್ಧಿಯೂ ಇಲ್ಲ..ಸುಖಾಸುಮ್ಮನೆ ಆರೋಪ ಮಾಡ್ತಾರೆ: ರವಿ ಬೆಳಗೆರೆ
ಸಲಹೆ ಕೊಡೋದಕ್ಕೆ ಏನಿದೆ
'ಸಿನಿಮಾ ಇಂಡಸ್ಟ್ರಿಯಲ್ಲಿ ಹಿರಿಯರು ಅಥವಾ ನಾಯಕತ್ವ ಎಂದಾಕ್ಷಣ ಎಚ್ಚರಿಕೆ, ಸಲಹೆ ನೀಡುವುದಲ್ಲ. ಅದು ಪ್ರತಿಯೊಬ್ಬರಿಗೂ ಅವರ ಮನಸ್ಸಿಗೆ ಬರಬೇಕು. ನನ್ನ ಜೀವನವನ್ನು ನಾನು ಪ್ರೀತಿಸಬೇಕು, ಇದು ದೇವರ ಕೊಟ್ಟ ಉಡುಗೊರೆ. ಅದನ್ನು ಚೆನ್ನಾಗಿ ನೋಡಬೇಕು' ಎಂದು ಹ್ಯಾಟ್ರಿಕ್ ಹೀರೋ ಪ್ರತಿಕ್ರಿಯೆ ನೀಡಿದ್ದಾರೆ.