Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯದಲ್ಲಿ ಸುಮಲತಾಗೆ ಸಪೋರ್ಟ್ ಮಾಡ್ತಾರ ಶಿವಣ್ಣ?
Recommended Video
ಮಂಡ್ಯ ಜಿಲ್ಲೆ ಕನ್ನಡ ಚಿತ್ರರಂಗಕ್ಕೆ ಎಷ್ಟೋ ಕಲಾವಿದರನ್ನು ನೀಡಿದೆ. ಅದೇ ರೀತಿ ಮಂಡ್ಯ ಎಷ್ಟೋ ಕಲಾವಿದರನ್ನು ರಾಜಕೀಯ ವ್ಯಕ್ತಿಗಳನಾಗಿ ಬದಲು ಮಾಡಿದೆ. ಇದೀಗ ಮತ್ತೆ ಮಂಡ್ಯ ಸ್ಯಾಂಡಲ್ ವುಡ್ ಕಲಾವಿದರ ಸ್ಪರ್ಧೆಗೆ ವೇದಿಕೆ ನೀಡಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರ್ ಜಿಡಿಎಸ್ ಪಕ್ಷದಿಂದ ಮಂಡ್ಯದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಅದೇ ಕ್ಷೇತ್ರದಲ್ಲಿ ನಟ ಅಂಬರೀಶ್ ಪತ್ನಿ ನಟಿ ಸುಮಲತಾ ಕೂಡ ಸ್ಪರ್ಧೆಗೆ ಸಿದ್ಧರಾಗಿದ್ದಾರೆ. ಹೀಗಿರುವಾಗ, ಸ್ಯಾಂಡಲ್ ವುಡ್ ನ ಯಾವ ಯಾವ ಕಲಾವಿದರು ಯಾರಿಗೆ ಸಪೋರ್ಟ್ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಿಗೂ ಇದೆ.
''ಸುದೀಪ್ ಗೆ ತೊಂದರೆ ನೀಡಲು ಇಷ್ಟ ಪಡುವುದಿಲ್ಲ'' ಕಿಚ್ಚನ ಬಗ್ಗೆ ಸುಮಲತಾ ಹೇಳಿಕೆ
ಅಂದಹಾಗೆ, ಇದೀಗ ನಟ ಶಿವರಾಜ್ ಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ. ಸುಮಲತಾ ಅವರ ಚುನಾವಣಾ ಸ್ಪರ್ಧೆ ಬಗ್ಗೆ ಶಿವಣ್ಣ ಹೇಳಿಕೆ ನೀಡಿದ್ದಾರೆ. ಮುಂದೆ ಓದಿ...
ಚುನಾವಣಾ ಸ್ಪರ್ಧೆ ಅವರ ನಿರ್ಧಾರ
ಸುಮಲತಾ ಅವರ ರಾಜಕೀಯ ಪ್ರವೇಶದ ಬಗ್ಗೆ ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದು ಅವರ ವೈಯಕ್ತಿಕ ನಿರ್ಧಾರ ಎಂದಿದ್ದಾರೆ. ಈ ಮೂಲಕ ಸುಮಲತಾ ರಾಜಕೀಯ ಎಂಟ್ರಿ ಬಗ್ಗೆ ಶಿವಣ್ಣ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಒಳ್ಳೆಯದಾಗಲಿ ಎಂದು ಶುಭಕೋರಿದ ಶಿವಣ್ಣ
ಅಂಬರೀಶ್ ಅವರ ಬಗ್ಗೆ ಹಾಗೂ ಅವರ ಕುಟುಂಬದ ಬಗ್ಗೆ ನನಗೆ ಬಹಳ ಪ್ರೀತಿ ಇದೆ. ಅಂಬರೀಶ್ ಅವರಿಗೆ ನಮ್ಮ ತಂದೆಗೆ ನೀಡುವ ರೀತಿ ಗೌರವ ನೀಡುತ್ತೇನೆ. ಸುಮಲತಾ ಅವರು ಚುನಾವಣೆಗೆ ನಿಲ್ಲುವ ನಿರ್ಧಾರ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶಿವರಾಜ್ ಕುಮಾರ್ ತಮ್ಮ ಕಡೆಯಿಂದ ಶುಭಾಶಯ ತಿಳಿಸಿದರು.
ದರ್ಶನ್ ಬಳಿಕ ಸುಮಲತಾ ಸಿಕ್ತು ಮನೆ ಮಗ ಯಶ್ ಬೆಂಬಲ!
ಚುನಾವಣಾ ಪ್ರಚಾರಕ್ಕೆ ಶಿವಣ್ಣ?
ಸುಮಲತಾ ಪರ ಶಿವಣ್ಣ ಚುನಾವಣಾ ಪ್ರಚಾರ ಮಾಡುತ್ತಾರ..? ಇಲ್ವಾ..? ಎನ್ನುವ ಬಗ್ಗೆ ಶಿವಣ್ಣ ಏನು ಹೇಳಲಿಲ್ಲ. ಆದರೆ, ''ಕಲಾವಿದರಾಗಿ ನಮಗೆ ರಾಜ್ಯಾದಂತ್ಯ ಅಭಿಮಾನಿಗಳು ಇರುತ್ತಾರೆ.'' ಎಂದು ಹೇಳಿದ ಶಿವಣ್ಣನ ಮುಖಭಾವ ಅವರ ಮನಸಿನ ಅನಿಸಿಕೆ ಹೇಳುತ್ತಿತ್ತು. ಶಿವಣ್ಣನ ಮಾತುಗಳನ್ನು ಕೇಳಿದರೆ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಬಹುತೇಕ ಕಡಿಮೆ.
ದರ್ಶನ್ ಬೆಂಬಲ ನೀಡಿದ್ದಾರೆ
ಸ್ಯಾಂಡಲ್ ವುಡ್ ನಟರ ಪೈಕಿ ನಟ ದರ್ಶನ್ ನೇರವಾಗಿ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸುಮಲತಾ ಅವರ ಪರವಾಗಿ ಮಂಡ್ಯದಲ್ಲಿ ಪ್ರಚಾರ ಮಾಡುತ್ತೇನೆ ಎಂದು ದರ್ಶನ್ ತಿಳಿಸಿದ್ದಾರೆ. ಅಂಬರೀಶ್ ಅವರು ಇದ್ದಾಗಲೂ ಅವರ ಪರ ಪ್ರಚಾರ ಮಾಡಿದ್ದೆ. ಈಗಲೂ ಆ ಕೆಲಸ ಮಾಡುತ್ತೇನೆ ಅದು ನನ್ನ ಕರ್ತವ್ಯ ಎಂದು ದರ್ಶನ್ ಹೇಳಿಕೆ ನೀಡಿದ್ದರು.