Don't Miss!
- News
ಕೂರ್ಮಗಿರಿ ಎಲ್ಲೋಡು ಆದಿನಾರಾಯಣಸ್ವಾಮಿ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ
- Technology
ಸ್ಮಾರ್ಟ್ಫೋನ್ಗಳಲ್ಲಿನ ಸೆನ್ಸರ್ಗಳ ಬಗ್ಗೆ ನಿಮಗೆ ಗೊತ್ತಾ?..ಇವುಗಳಿಂದ ಲಾಭವೇನು?
- Automobiles
ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಬೆಲೆ ಹೆಚ್ಚಿಸಿದ ಟೊಯೊಟಾ
- Sports
Border-Gavaskar Trophy: ಭಾರತ vs ಆಸ್ಟ್ರೇಲಿಯಾ ಅತಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದ ಆಟಗಾರರ ಪಟ್ಟಿ
- Finance
Real Estate Deal: ದೇಶದ ಅತೀ ದೊಡ್ಡ ರಿಯಲ್ ಎಸ್ಟೇಟ್ ಡೀಲ್ಗೆ ಹೂಡಿಕೆ ಮಾಡಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle
ಕ್ಯಾನ್ಸರ್ ಚಿಕಿತ್ಸೆ ಬಳಿಕ ಮಗು ಪಡೆಯಲು ಸುರಕ್ಷಿತ ವಿಧಾನ ಇದೇ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶಿವಣ್ಣ-ದ್ವಾರಕೀಶ್ ಜೋಡಿಯ ಹೊಸ ಚಿತ್ರ ಆರಂಭ
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಸದ್ಯ ಕವಚ, ರುಸ್ತುಂ ಚಿತ್ರದ ಶೂಟಿಂಗ್ ಮಾಡ್ತಿರುವ ಶಿವಣ್ಣ ಈ ಮಧ್ಯೆ ದೊಡ್ಡ ನಿರ್ಮಾಣ ಸಂಸ್ಥೆಯ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.
ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ.ಎಸ್.ದ್ವಾರಕೀಶ್ ಹಾಗೂ ಯೋಗಿ ದ್ವಾರಕೀಶ್ ಬಂಗಳೆ ಅವರು ನಿರ್ಮಿಸುತ್ತಿರುವ 'ಪ್ರೊಡಕ್ಷನ್ ನಂ 52' ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ನಾಯಕರಾಗಿದ್ದಾರೆ.
ಶಿವಣ್ಣ-ಪಿ.ವಾಸು
ಜೋಡಿಯ
'ಆನಂದ್'
ಚಿತ್ರಕ್ಕೆ
ಮುಹೂರ್ತ
ನಿಗದಿ
ಆಯ್ತು
ಕಣ್ರೀ
ಈ ಚಿತ್ರದ ಮುಹೂರ್ತ ಸಮಾರಂಭ ನವಂಬರ್ 9ರ ಶುಕ್ರವಾರ ಹೆಚ್.ಎಸ್.ಆರ್ ಬಡಾವಣೆಯ ಶ್ರೀಬಸವೇಶ್ವರ ಗಾಯತ್ರಿ ದೇವಿ ದೇವಾಲಯದಲ್ಲಿ ನೆರವೇರಿತು. ನಿರ್ಮಾಪಕ(ಮುಂಬೈ) ಹಾಗೂ ಉದ್ಯಮಿ ಕೊಲಂಬಸ್ ಜೇವಿಯರ್ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಕೋರಿದರು.
ಉದ್ಯಮಿ ಸತ್ಯಮೂರ್ತಿ ಕ್ಯಾಮೆರಾ ಚಾಲನೆ ಮಾಡಿದರು. ಇನ್ನು ಈ ಚಿತ್ರವನ್ನ ಖ್ಯಾತ ನಿರ್ದೇಶಕ ಪಿ ವಾಸು ನಿರ್ದೇಶನ ಮಾಡ್ತಿದ್ದಾರೆ. ಈ ಹಿಂದೆ ಶಿವರಾಜ್ ಕುಮಾರ್ ಜೊತೆಯಲ್ಲಿ ಶಿವಲಿಂಗ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ, ಶಿವಣ್ಣನ ಜೊತೆಯಲ್ಲಿ ಎರಡನೇ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

ಶಿವಣ್ಣ
'ಶಿವಲಿಂಗ'
ಮೇಲೆ
ಸೂಪರ್
ಸ್ಟಾರ್
ರಜನಿಕಾಂತ್
ಕಣ್ಣು!
ಪಿ.ವಾಸು ಮತ್ತು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಜೋಡಿಯ ಚಿತ್ರದಲ್ಲಿ ಅನಂತನಾಗ್, ರಚಿತಾರಾಮ್, ಸಾಧುಕೋಕಿಲ, ರಂಗಾಯಣ ರಘು ಮುಂತಾದ ಪ್ರಮುಖರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಡಿಸಂಬರ್ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ.