Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ-ದ್ವಾರಕೀಶ್ ಜೋಡಿಯ ಹೊಸ ಚಿತ್ರ ಆರಂಭ
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಸದ್ಯ ಕವಚ, ರುಸ್ತುಂ ಚಿತ್ರದ ಶೂಟಿಂಗ್ ಮಾಡ್ತಿರುವ ಶಿವಣ್ಣ ಈ ಮಧ್ಯೆ ದೊಡ್ಡ ನಿರ್ಮಾಣ ಸಂಸ್ಥೆಯ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.
ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ.ಎಸ್.ದ್ವಾರಕೀಶ್ ಹಾಗೂ ಯೋಗಿ ದ್ವಾರಕೀಶ್ ಬಂಗಳೆ ಅವರು ನಿರ್ಮಿಸುತ್ತಿರುವ 'ಪ್ರೊಡಕ್ಷನ್ ನಂ 52' ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ನಾಯಕರಾಗಿದ್ದಾರೆ.
ಶಿವಣ್ಣ-ಪಿ.ವಾಸು ಜೋಡಿಯ 'ಆನಂದ್' ಚಿತ್ರಕ್ಕೆ ಮುಹೂರ್ತ ನಿಗದಿ ಆಯ್ತು ಕಣ್ರೀ
ಈ ಚಿತ್ರದ ಮುಹೂರ್ತ ಸಮಾರಂಭ ನವಂಬರ್ 9ರ ಶುಕ್ರವಾರ ಹೆಚ್.ಎಸ್.ಆರ್ ಬಡಾವಣೆಯ ಶ್ರೀಬಸವೇಶ್ವರ ಗಾಯತ್ರಿ ದೇವಿ ದೇವಾಲಯದಲ್ಲಿ ನೆರವೇರಿತು. ನಿರ್ಮಾಪಕ(ಮುಂಬೈ) ಹಾಗೂ ಉದ್ಯಮಿ ಕೊಲಂಬಸ್ ಜೇವಿಯರ್ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಕೋರಿದರು.
ಉದ್ಯಮಿ ಸತ್ಯಮೂರ್ತಿ ಕ್ಯಾಮೆರಾ ಚಾಲನೆ ಮಾಡಿದರು. ಇನ್ನು ಈ ಚಿತ್ರವನ್ನ ಖ್ಯಾತ ನಿರ್ದೇಶಕ ಪಿ ವಾಸು ನಿರ್ದೇಶನ ಮಾಡ್ತಿದ್ದಾರೆ. ಈ ಹಿಂದೆ ಶಿವರಾಜ್ ಕುಮಾರ್ ಜೊತೆಯಲ್ಲಿ ಶಿವಲಿಂಗ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ, ಶಿವಣ್ಣನ ಜೊತೆಯಲ್ಲಿ ಎರಡನೇ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.
ಶಿವಣ್ಣ 'ಶಿವಲಿಂಗ' ಮೇಲೆ ಸೂಪರ್ ಸ್ಟಾರ್ ರಜನಿಕಾಂತ್ ಕಣ್ಣು!
ಪಿ.ವಾಸು ಮತ್ತು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಜೋಡಿಯ ಚಿತ್ರದಲ್ಲಿ ಅನಂತನಾಗ್, ರಚಿತಾರಾಮ್, ಸಾಧುಕೋಕಿಲ, ರಂಗಾಯಣ ರಘು ಮುಂತಾದ ಪ್ರಮುಖರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಡಿಸಂಬರ್ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ.