Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ-ದ್ವಾರಕೀಶ್ ಜೋಡಿಯ ಹೊಸ ಚಿತ್ರ ಆರಂಭ
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಸದ್ಯ ಕವಚ, ರುಸ್ತುಂ ಚಿತ್ರದ ಶೂಟಿಂಗ್ ಮಾಡ್ತಿರುವ ಶಿವಣ್ಣ ಈ ಮಧ್ಯೆ ದೊಡ್ಡ ನಿರ್ಮಾಣ ಸಂಸ್ಥೆಯ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.
ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಬಿ.ಎಸ್.ದ್ವಾರಕೀಶ್ ಹಾಗೂ ಯೋಗಿ ದ್ವಾರಕೀಶ್ ಬಂಗಳೆ ಅವರು ನಿರ್ಮಿಸುತ್ತಿರುವ 'ಪ್ರೊಡಕ್ಷನ್ ನಂ 52' ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ನಾಯಕರಾಗಿದ್ದಾರೆ.
ಶಿವಣ್ಣ-ಪಿ.ವಾಸು ಜೋಡಿಯ 'ಆನಂದ್' ಚಿತ್ರಕ್ಕೆ ಮುಹೂರ್ತ ನಿಗದಿ ಆಯ್ತು ಕಣ್ರೀ
ಈ ಚಿತ್ರದ ಮುಹೂರ್ತ ಸಮಾರಂಭ ನವಂಬರ್ 9ರ ಶುಕ್ರವಾರ ಹೆಚ್.ಎಸ್.ಆರ್ ಬಡಾವಣೆಯ ಶ್ರೀಬಸವೇಶ್ವರ ಗಾಯತ್ರಿ ದೇವಿ ದೇವಾಲಯದಲ್ಲಿ ನೆರವೇರಿತು. ನಿರ್ಮಾಪಕ(ಮುಂಬೈ) ಹಾಗೂ ಉದ್ಯಮಿ ಕೊಲಂಬಸ್ ಜೇವಿಯರ್ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಕೋರಿದರು.
ಉದ್ಯಮಿ ಸತ್ಯಮೂರ್ತಿ ಕ್ಯಾಮೆರಾ ಚಾಲನೆ ಮಾಡಿದರು. ಇನ್ನು ಈ ಚಿತ್ರವನ್ನ ಖ್ಯಾತ ನಿರ್ದೇಶಕ ಪಿ ವಾಸು ನಿರ್ದೇಶನ ಮಾಡ್ತಿದ್ದಾರೆ. ಈ ಹಿಂದೆ ಶಿವರಾಜ್ ಕುಮಾರ್ ಜೊತೆಯಲ್ಲಿ ಶಿವಲಿಂಗ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ, ಶಿವಣ್ಣನ ಜೊತೆಯಲ್ಲಿ ಎರಡನೇ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.
ಶಿವಣ್ಣ 'ಶಿವಲಿಂಗ' ಮೇಲೆ ಸೂಪರ್ ಸ್ಟಾರ್ ರಜನಿಕಾಂತ್ ಕಣ್ಣು!
ಪಿ.ವಾಸು ಮತ್ತು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಜೋಡಿಯ ಚಿತ್ರದಲ್ಲಿ ಅನಂತನಾಗ್, ರಚಿತಾರಾಮ್, ಸಾಧುಕೋಕಿಲ, ರಂಗಾಯಣ ರಘು ಮುಂತಾದ ಪ್ರಮುಖರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಡಿಸಂಬರ್ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ.