Don't Miss!
- News ಬಿಜೆಪಿ ಯುವಕರಿಗೆ ಪಕೋಡಾ ಮಾರಿ ಎಂದು ಹೇಳಿ ಅವಮಾನ ಮಾಡಿದೆ- ಡಿ ಕೆ ಶಿವಕುಮಾರ್ ಕಿಡಿ
- Finance ಐತಿಹಾಸಿಕ ಹರಾಜು: ಭಾರತ ಮೂಲದ ನೆಲ್ಲೂರು ಹಸು ಬ್ರೆಜಿಲ್ ನಲ್ಲಿ 40 ಕೋಟಿ ರೂ.ಗೆ ಮಾರಾಟ!
- Sports IPL 2023: SRH ಅತ್ಯಧಿಕ ಐಪಿಎಲ್ ಮೊತ್ತ ಗಳಿಸಿದ ಹೊರತಾಗಿಯೂ RCBಯ ಈ ದಾಖಲೆ ಟಚ್ ಮಾಡಲಾಗಲಿಲ್ಲ
- Technology ಅಗ್ಗದ ಬೆಲೆಯಲ್ಲಿ 5G ಫೋನ್ ಬೇಕೆ?..ಹಾಗಿದ್ರೆ ಈ ಆಫರ್ ನಿಮಗೆ ಸೂಪರ್!
- Automobiles ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ: ಟಾಟಾ ಟಿಯಾಗೋ ಇವಿ EMI, ಆನ್ ರೋಡ್ ಬೆಲೆ ಎಷ್ಟು?
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗೆ ಸುಸಜ್ಜಿತ ಆಸ್ಪತ್ರೆ ಬೇಕು ಅಭಿಯಾನಕ್ಕೆ ಶಿವಣ್ಣ ಬೆಂಬಲ
Recommended Video
ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ನಿನ್ನೆ (ಬುದವಾರ) ಶುರುವಾಗಿದೆ. ಟ್ವಿಟ್ಟರ್ ನಲ್ಲಿ ಪ್ರಾರಂಭವಾಗಿರುವ ಈ ಅಭಿಯಾನಕ್ಕೆ ನಟ ಶಿವರಾಜ್ ಕುಮಾರ್ ಸಹ ಬೆಂಬಲ ನೀಡಿದ್ದಾರೆ.
#WeNeedEmergencyHospitalInKodagu ಹ್ಯಾಶ್ ಟ್ಯಾಗ್ ಬಳಸಿ ಸಾಕಷ್ಟು ಜನ ಟ್ವೀಟ್ ಮಾಡಿ ಈ ಅಭಿಯಾನಕ್ಕೆ ಕೈ ಜೋಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಹಾಗೂ ಜನ ಪ್ರತಿನಿಧಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಇದಾಗಿದೆ.
ಡಬಲ್ ಖುಷಿಯ ಸಂಭ್ರಮದಲ್ಲಿ ಶಿವರಾಜ್ ಕುಮಾರ್ ಕುಟುಂಬ
ನಟ ಶಿವರಾಜ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ''ಕೊಡಗು ಎಂದಿಗೂ ಕರ್ನಾಟಕಕ್ಕೆ ಸೇರಿದ್ದು. ನಮ್ಮ ದೇಶ ಕಾಯುವ ಎಷ್ಟೋ ಯೋಧರು ಕೊಡಗುದವರಾಗಿದ್ದಾರೆ. ಅಲ್ಲಿನ ಜನರಿಗೆ ಆಸ್ಪತ್ರೆಯ ವ್ಯವಸ್ಥೆ ಬಹಳ ಕಡಿಮೆ ಇದೆ ಎಂದು ಕೇಳಿಪಟ್ಟೆ. ಅಲ್ಲಿ ಆಸ್ಪತ್ರೆ ವ್ಯವಸ್ಥೆಗಳು ಆಗಲಿ ಎಂದು ಚಿತ್ರರಂಗದ ಪರವಾಗಿ ನಾನು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ನಾವು ನಿಮ್ಮ ಜೊತೆಗೆ ಇದ್ದೇವೆ.'' ಎಂದಿದ್ದಾರೆ.
ಅಂದಹಾಗೆ, ಕೊಡಗು ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ವ್ಯವಸ್ಥೆ ಇಲ್ಲ. ಅನರೋಗ್ಯ, ಅಪಘಾತ ಏನಾದರೂ ಆದರೆ ಇಲ್ಲಿಯ ಜನರು ಮಂಗಳೂರು, ಬೆಂಗಳೂರು, ಮೈಸೂರು, ಸುಳ್ಯಗೆ ಹೋಗಬೇಕಾಗಿದೆ. ಆಂಬುಲೆನ್ಸ್ ಮೂಲಕ ಹೋಗುವಾಗಲೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಒಂದು ಒಳ್ಳೆಯ ಆಸ್ಪತ್ರೆಯ ಅಗತ್ಯ ಇದೆ ಎಂದು ಕೊಡಗು ಜನರು ಮನವಿ ಮಾಡುತ್ತಿದ್ದಾರೆ.
ಕೊಡಗು ಅಭಿಯಾನದ ಬಗ್ಗೆ ಶಿವಣ್ಣ ಮಾತುಗಳನ್ನು ಕೇಳಲು ಈ ಲಿಂಕ್ ಕ್ಲಿಕ್ಕಿಸಿ