Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗೆ ಸುಸಜ್ಜಿತ ಆಸ್ಪತ್ರೆ ಬೇಕು ಅಭಿಯಾನಕ್ಕೆ ಶಿವಣ್ಣ ಬೆಂಬಲ
Recommended Video
ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ನಿನ್ನೆ (ಬುದವಾರ) ಶುರುವಾಗಿದೆ. ಟ್ವಿಟ್ಟರ್ ನಲ್ಲಿ ಪ್ರಾರಂಭವಾಗಿರುವ ಈ ಅಭಿಯಾನಕ್ಕೆ ನಟ ಶಿವರಾಜ್ ಕುಮಾರ್ ಸಹ ಬೆಂಬಲ ನೀಡಿದ್ದಾರೆ.
#WeNeedEmergencyHospitalInKodagu ಹ್ಯಾಶ್ ಟ್ಯಾಗ್ ಬಳಸಿ ಸಾಕಷ್ಟು ಜನ ಟ್ವೀಟ್ ಮಾಡಿ ಈ ಅಭಿಯಾನಕ್ಕೆ ಕೈ ಜೋಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಹಾಗೂ ಜನ ಪ್ರತಿನಿಧಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಇದಾಗಿದೆ.
ಡಬಲ್ ಖುಷಿಯ ಸಂಭ್ರಮದಲ್ಲಿ ಶಿವರಾಜ್ ಕುಮಾರ್ ಕುಟುಂಬ
ನಟ ಶಿವರಾಜ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ''ಕೊಡಗು ಎಂದಿಗೂ ಕರ್ನಾಟಕಕ್ಕೆ ಸೇರಿದ್ದು. ನಮ್ಮ ದೇಶ ಕಾಯುವ ಎಷ್ಟೋ ಯೋಧರು ಕೊಡಗುದವರಾಗಿದ್ದಾರೆ. ಅಲ್ಲಿನ ಜನರಿಗೆ ಆಸ್ಪತ್ರೆಯ ವ್ಯವಸ್ಥೆ ಬಹಳ ಕಡಿಮೆ ಇದೆ ಎಂದು ಕೇಳಿಪಟ್ಟೆ. ಅಲ್ಲಿ ಆಸ್ಪತ್ರೆ ವ್ಯವಸ್ಥೆಗಳು ಆಗಲಿ ಎಂದು ಚಿತ್ರರಂಗದ ಪರವಾಗಿ ನಾನು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ನಾವು ನಿಮ್ಮ ಜೊತೆಗೆ ಇದ್ದೇವೆ.'' ಎಂದಿದ್ದಾರೆ.
ಅಂದಹಾಗೆ, ಕೊಡಗು ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ವ್ಯವಸ್ಥೆ ಇಲ್ಲ. ಅನರೋಗ್ಯ, ಅಪಘಾತ ಏನಾದರೂ ಆದರೆ ಇಲ್ಲಿಯ ಜನರು ಮಂಗಳೂರು, ಬೆಂಗಳೂರು, ಮೈಸೂರು, ಸುಳ್ಯಗೆ ಹೋಗಬೇಕಾಗಿದೆ. ಆಂಬುಲೆನ್ಸ್ ಮೂಲಕ ಹೋಗುವಾಗಲೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಒಂದು ಒಳ್ಳೆಯ ಆಸ್ಪತ್ರೆಯ ಅಗತ್ಯ ಇದೆ ಎಂದು ಕೊಡಗು ಜನರು ಮನವಿ ಮಾಡುತ್ತಿದ್ದಾರೆ.
ಕೊಡಗು ಅಭಿಯಾನದ ಬಗ್ಗೆ ಶಿವಣ್ಣ ಮಾತುಗಳನ್ನು ಕೇಳಲು ಈ ಲಿಂಕ್ ಕ್ಲಿಕ್ಕಿಸಿ