Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕನ ಸಿನಿಮಾದಲ್ಲಿ ಶಿವಣ್ಣ ನಟನೆ.?
Recommended Video
ಸ್ಯಾಂಡಲ್ ವುಡ್ ನಲ್ಲಿ ಅತಿ ಹೆಚ್ಚು ಬಿಜಿಯಾಗಿರುವ ನಟರ ಪೈಕಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಒಬ್ಬರು. ವರ್ಷಕ್ಕೆ ಎರಡ್ಮೂರು ಸಿನಿಮಾಗಳನ್ನು ನೀಡುವ ಶಿವಣ್ಣ ಸದಾ ಒಂದಲ್ಲಾ ಒಂದು ಚಿತ್ರದ ಶೂಟಿಂಗ್ ನಲ್ಲಿಯೇ ತೊಡಗಿರುತ್ತಾರೆ.
ಇನ್ನೂ ಮೂರ್ನಾಲ್ಕು ವರ್ಷಗಳಿಗೆ ಆಗುವಷ್ಟು ಸಿನಿಮಾಗಳು ಶಿವಣ್ಣನ ಕೈಯಲ್ಲಿವೆ. ಹೀಗಿರುವಾಗಲೇ, ಹೊಸ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿ ಬಂದಿದೆ. ಅದೇನಪ್ಪಾ ಅಂದ್ರೆ, ನಿರ್ದೇಶಕ ಪಿ.ಶೇಷಾದ್ರಿ ಚಿತ್ರದಲ್ಲಿ ಅಭಿನಯಿಸಲು ಶಿವರಾಜ್ ಕುಮಾರ್ ಒಪ್ಪಿಗೆ ನೀಡಿದ್ದಾರಂತೆ.
ಒಳ್ಳೆಯ ಸ್ಕ್ರಿಪ್ಟ್ ತೆಗೆದುಕೊಂಡು ಹೋದಾಗ, 'ಇಲ್ಲ' ಎಂದು ಶಿವಣ್ಣ ಹೇಳಿದ ಉದಾಹರಣೆಯೇ ಇಲ್ಲ. ಅಂದ್ಮೇಲೆ, ಪಿ.ಶೇಷಾದ್ರಿ ಅಂದ್ರೆ ಸುಮ್ನೆನಾ.? ಪಿ.ಶೇಷಾದ್ರಿ ಆಕ್ಷನ್ ಕಟ್ ಹೇಳಿದ ಎಂಟು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.
ಶಿವಣ್ಣನಿಗೆ ಕೋಪ, ಕಿರಿಕಿರಿ ಯಾಕೆ.? ಕಾರಣ ಇಲ್ಲಿದೆ ಓದಿರಿ....
ನ್ಯಾಷನಲ್ ಅವಾರ್ಡ್ ವಿನ್ನಿಂಗ್ ಡೈರೆಕ್ಟರ್ ಕಾಲ್ ಶೀಟ್ ಕೇಳಿದಾಗ, ಶಿವಣ್ಣ 'ನೋ' ಅಂತಾರಾ.? ಚಾನ್ಸೇ ಇಲ್ಲ.! ''ಪಿ.ಶೇಷಾದ್ರಿ ಅವರ ಜೊತೆಗೆ ಕೆಲಸ ಮಾಡುವ ಸಾಧ್ಯತೆ ಇದೆ'' ಅಂತ ಸ್ವತಃ ಶಿವಣ್ಣ ಅವರೇ ಹೇಳಿಕೊಂಡಿದ್ದಾರೆ.
ಸದ್ಯ 'ಕವಚ' ಶೂಟಿಂಗ್ ಮುಗಿಸಿರುವ ಶಿವಣ್ಣ 'ರುಸ್ತುಂ' ಹಾಗೂ 'ದ್ರೋಣ' ಚಿತ್ರಗಳಿಗೆ ಚಾಲನೆ ಕೊಟ್ಟಿದ್ದಾರೆ. ಈ ಎರಡು ಸಿನಿಮಾಗಳು ಮುಗಿದ ಬಳಿಕ ಪಿ.ಶೇಷಾದ್ರಿ ಸಿನಿಮಾದಲ್ಲಿ ಶಿವಣ್ಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೆಚ್ಚಿನ ಅಪ್ ಡೇಟ್ಸ್ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಪುಟಕ್ಕೆ ಭೇಟಿ ನೀಡುತ್ತಿರಿ.