Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನಲ್ಲಿ ರುಸ್ತುಂ ನೋಡಲಿದ್ದಾರೆ ಶಿವರಾಜ್ ಕುಮಾರ್
Recommended Video
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ರುಸ್ತುಂ ಸಿನಿಮಾ ರಾಜ್ಯಾದ್ಯಂತ ತೆರೆಕಂಡಿದ್ದು, ಎಲ್ಲೆಡೆಯೂ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಸಿನಿಮಾ ನೋಡಿ ಹೊರಬಂದ ಪ್ರೇಕ್ಷಕರು ಇದು ಪಕ್ಕಾ ಬ್ಲಾಕ್ ಬಸ್ಟರ್ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಸಾಮಾನ್ಯವಾಗಿ ಸಿನಿಮಾ ರಿಲೀಸ್ ದಿನ ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಮುಖ್ಯ ಚಿತ್ರಮಂದಿರಗಳಿಗೆ ಸ್ಟಾರ್ ನಟರು ಭೇಟಿ ನೀಡುತ್ತಾರೆ. ಸಿನಿಮಾ ಸಕ್ಸಸ್ ಆದ ಮೇಲೆ ವಿಜಯಯಾತ್ರೆ ಎಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಇತರೆ ಜಿಲ್ಲೆಗಳ ಚಿತ್ರಮಂದಿರಗಳಿಗೆ ಹೋಗ್ತಾರೆ.
Rustum Review: ಆಕ್ಷನ್ ಗೆ ದೊಡ್ಡಪ್ಪ ಈ ರುಸ್ತುಂ
ಆದರೆ, ಶಿವಣ್ಣ ರುಸ್ತುಂ ಚಿತ್ರವನ್ನ ರಿಲೀಸ್ ಆದ ಎರಡನೇ ದಿನವೇ ಮೈಸೂರಿನಲ್ಲಿ ನೋಡಲಿದ್ದಾರೆ. ಮೈಸೂರಿನ ಶಾಂತಲಾ ಚಿತ್ರಮಂದಿರದಲ್ಲಿ ರುಸ್ತುಂ ಪ್ರದರ್ಶನವಾಗುತ್ತಿದ್ದು, ಇಂದು ಸಂಜೆ 4 ಗಂಟೆ ಶೋ ವೀಕ್ಷಿಸಲಿದ್ದಾರೆ ಹ್ಯಾಟ್ರಿಕ್ ಹೀರೋ.
ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು ಜಯಣ್ಣ ನಿರ್ಮಿಸಿದ್ದಾರೆ. ಆದರೆ, ಬಿಡುಗಡೆಗೂ ಮುಂಚೆ ರುಸ್ತುಂ ಚಿತ್ರದ ಬಗ್ಗೆ ಹೆಚ್ಚು ಪ್ರಚಾರ ಮಾಡಿಲ್ಲ ಎನ್ನುವು ಮಾತು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
'ರುಸ್ತುಂ' ಮೊದಲಾರ್ಧ ಅಷ್ಟಕ್ಕಷ್ಟೆ, ಎರಡನೇ ಭಾಗ ಸೂಪರ್
ಇದೀಗ, ಬಿಡುಗಡೆಯಾದ ನಂತರದ ದಿನದಲ್ಲೇ ಥಿಯೇಟರ್ ವಿಸಿಟ್ ಕೊಡುತ್ತಿರುವುದು ಪ್ರೇಕ್ಷಕರಿಗೆ ಇನ್ನಷ್ಟು ಜೋಶ್ ತುಂಬಲಿದೆ. ಇನ್ನುಳಿದಂತೆ ಶಿವಣ್ಣ ಜೊತೆಯಲ್ಲಿ, ವಿವೇಕ್ ಒಬೆರಾಯ್, ಶ್ರದ್ಧಾ ಶ್ರೀನಾಥ್, ಮಯೂರಿ, ಮಹೇಂದ್ರನ್, ಶಿವರಾಜ್ ಕೆ ಆರ್ ಪೇಟೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.