Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟಗರು' 100 ಡೇಸ್ : ಸಂತೋಷ್ ಚಿತ್ರಮಂದಿರದಲ್ಲಿ ಫ್ಯಾನ್ಸ್ ಜೊತೆ ಶಿವಣ್ಣ ಹಬ್ಬ
Recommended Video
ನಟ ಶಿವರಾಜ್ ಕುಮಾರ್ ಅಭಿನಯದ 'ಟಗರು' ಸಿನಿಮಾ ಇಂದಿಗೆ ಸರಿಯಾಗಿ ನೂರು ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಶಿವಣ್ಣ ಬೆಂಗಳೂರಿನ ಸಂತೋಷ್ ಚಿತ್ರಮಂದಿರಕ್ಕೆ ಆಗಮಿಸಿದ್ದಾರೆ.
ಇಂದು ಅಖಿಲ ಕರ್ನಾಟಕ ಡಾ.ಶಿವರಾಜ್ ಕುಮಾರ್ ಸೇನಾ ಸಮಿತಿ ಹಾಗೂ ಗಂಡುಗಲಿ ಡಾ.ಶಿವರಾಜ್ ಕುಮಾರ್ ಅಭಿಮಾನಿ ಸಂಘದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂತೋಷ್ ಚಿತ್ರಮಂದಿರದಲ್ಲಿ ನೂರರೂ ಸಂಖ್ಯೆಯ ಅಭಿಮಾನಿಗಳು ಸೇರಿದ್ದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.
ವಿಮರ್ಶೆ: ಟಗರು ಖದರು, ಡಾಲಿ ಪೊಗರು, ಸ್ಕ್ರೀನ್ ಪ್ಲೇ ಸೂಪರ್ರು
ಇನ್ನು ಈ ಕಾರ್ಯಕ್ರಮದಲ್ಲಿ ಶಿವಣ್ಣನ ಜೊತೆಗೆ ನಟ ಧನಂಜಯ್, ನಟಿ ಮಾನ್ವಿತಾ ಹರೀಶ್, ನಿರ್ದೇಶಕ ಸೂರಿ, ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಸಹ ಭಾಗಿಯಾಗಿದ್ದರು. ಇದರ ಜೊತೆಗೆ ಇಂದೇ 4 ಗಂಟೆಗೆ ಮಾಗಡಿ ರಸ್ತೆಯ ವೀರೇಶ್ ಚಿತ್ರಮಂದಿರದಲ್ಲಿ ಶಿವಣ್ಣನಿಗೆ ಸನ್ಮಾನ ಮಾಡಿ ಜನರಿಗೆ ಸಿಹಿ ಹಂಚಲಾಗುತ್ತದೆ. ಸಂಜೆ 6 ಗಂಟೆಗೆ ಜಿಟಿ ಮಾಲ್ ನಲ್ಲಿಯೂ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜೊತೆಗೆ ಮೈಸೂರಿನ ಶಾಂತಲ ಚಿತ್ರಮಂದಿರದಲ್ಲಿ ಅಲ್ಲಿರುವ ಅಭಿಮಾನಿಗಳು ಪಟಾಕಿ ಸಿಡಿಸಿ, ಶಿವಣ್ಣನ ಕಟ್ ಔಟ್ ಗೆ ಹಾರ ಹಾಕಿ ಸಂಭ್ರಮಿಸಲಿದ್ದಾರೆ.
ಅಂದಹಾಗೆ, 'ಟಗರು' ಈ ವರ್ಷ ನೂರು ದಿನ ಪೂರೈಸಿದ ಕನ್ನಡದ ಮೊದಲ ಸಿನಿಮಾವಾಗಿದೆ.ಸೂರಿ ತಮ್ಮ ವಿಭಿನ್ನ ಸ್ಕ್ರೀನ್ ಪ್ಲೇ ಮೂಲಕ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಶ್ರೀ ಕಾಂತ್ ಬಂಡವಾಳ ಹಾಕಿದ್ದರು. ಧನಂಜಯ್, ಭಾವನ, ಮಾನ್ವಿತಾ ಹರೀಶ್, ವಸಿಷ್ಟ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.