Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ 12 ರಂದು ಶಿವರಾಜ್ ಹುಟ್ಟುಹಬ್ಬ.
ಮೊನ್ನೆಯಷ್ಟೇ ಅಭಿಮಾನಿಗಳಿಂದ 'ನಾಟ್ಯ ಸಾರ್ವಭೌಮ" ಬಿರುದನ್ನು ಧರಿಸಿಕೊಂಡು ಬೀಗುತ್ತಿರುವ 'ಯುವರಾಜ" ಶಿವರಾಜ್ ಕುಮಾರ್ ಮತ್ತೊಮ್ಮೆ ಅಭಿಮಾನಿಗಳ ಪ್ರೀತಿಯ ಮಳೆಯಲ್ಲಿ ತೊಯ್ಯಲು ಸಿದ್ಧವಾಗುತ್ತಿದ್ದಾರೆ. ವಿಷಯ ಇಷ್ಟೇ, ಜುಲೈ 12 ರಂದು ಶಿವರಾಜ್ ಹುಟ್ಟುಹಬ್ಬ .
ಶಿವರಾಜ್ರ 40 ನೇ ಹುಟ್ಟುಹಬ್ಬ ಆಚರಿಸುವ ಹೊಣೆಯನ್ನು 'ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಸೇನಾ ಸಮಿತಿ" ಹೊತ್ತುಕೊಂಡಿದೆ. ಪ್ರತಿವರ್ಷ ನೆಚ್ಚಿನ ನಾಯಕನ ಹುಟ್ಟುಹಬ್ಬದ ಆಚರಣೆಯ ನೆನಪಿಗಾಗಿ ದೀನ ದಲಿತರಿಗೆ ಉಪಯೋಗವಾಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದನ್ನು ಸೇನಾ ಸಮಿತಿ ಸಂಪ್ರದಾಯದಂತೆ ಪಾಲಿಸಿಕೊಂಡು ಬರುತ್ತಿದೆ. ಈ ವರ್ಷದ ಫಲಾನುಭವಿಗಳು ಅಂಗವಿಕಲರು.
ಮಹಾಲಕ್ಷ್ಮಿಪುರದ ಭೋವಿಪಾಳ್ಯದಲ್ಲಿರುವ ಶ್ರೀ ಸರ್. ಎಂ. ವಿಶ್ವೇಶ್ವರಯ್ಯ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದಲ್ಲಿರುವ ಐವರು ಅಂಗವಿಕಲರಿಗೆ ಉಪಯೋಗವಾಗುವಂತಹ ಉಪಕರಣಗಳನ್ನು ಜುಲೈ 12 ರಂದು ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವತಃ ಶಿವರಾಜ್ ಕುಮಾರ್ ಅವರೇ ವಿತರಿಸುತ್ತಾರಂತೆ. ನಲವತ್ತಾಯಿತಲ್ಲ , ಜನಮುಖಿಯಾಗುತ್ತಿದ್ದಾರೆ ಅನ್ನೋಣವಾ?