Don't Miss!
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್-ಶಿವಣ್ಣ ಬಗ್ಗೆ ಪ್ರಿಯಾ ವಾರಿಯರ್ ಏನಂದ್ರು?
ಶಿವರಾಜ್ ಕುಮಾರ್ ಅವರ ಅತ್ತೆ ಮಗ ಸೂರಜ್ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದಾರೆ. ಧ್ರುವನ್ ಆಗಿ ಹೆಸರು ಬದಲಿಸಿಕೊಂಡಿರುವ ಸೂರಜ್ ಸ್ಯಾಂಡಲ್ ವುಡ್ ಪ್ರವೇಶಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ದರ್ಶನ್ ಸಾಥ್ ನೀಡಿದ್ದಾರೆ.
ರಘು ಕೋವಿ ನಿರ್ದೇಶನ ಮಾಡುತ್ತಿರುವ ಚಿತ್ರವನ್ನ ಬಿಎಸ್ ಸುಧೀಂದ್ರ ನಿರ್ಮಿಸುತ್ತಿದ್ದಾರೆ. ವಿಶೇಷ ಅಂದ್ರೆ ಧ್ರುವನ್ ಅವರ ಚೊಚ್ಚಲ ಚಿತ್ರದಲ್ಲಿ ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ.
ಇತ್ತೀಚಿಗಷ್ಟೆ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ ಮತ್ತು ಶಿವರಾಜ್ ಕುಮಾರ್ ಆಗಮಿಸಿದ್ದರು. ಚಿತ್ರದ ಮೊದಲ ದೃಶ್ಯಕ್ಕೆ ಶಿವಣ್ಣ ಕ್ಲಾಪ್ ಮಾಡಿದ್ರೆ, ಕ್ಯಾಮರಾಗೆ ಚಾಲೆಂಜಿಂಗ್ ಸ್ಟಾರ್ ಚಾಲನೆ ನೀಡಿದರು.
ಸಿನಿಮಾಟೋಗ್ರಫರ್ ಜೊತೆ ಪ್ರಿಯಾ ವಾರಿಯರ್ 'ಮುತ್ತಿನ ಆಟ'
ಬಳಿಕ ಮಾಧ್ಯಮದವರು ಜೊತೆ ಸಂತಸ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್, 'ಕನ್ನಡದಲ್ಲಿ ಎರಡನೇ ಸಿನಿಮಾ ಮಾಡುತ್ತಿರುವುದು ಖುಷಿ ತಂದಿದೆ' ಎಂದರು. ''ಶಿವರಾಜ್ ಕುಮಾರ್ ಮತ್ತು ದರ್ಶನ್ ಅವರು ಬಂದಿದ್ದು ಬಹಳ ಸಂತಸ ತಂದಿದೆ. ಅವರಿಬ್ಬರು ಲೆಜೆಂಡ್. ಅವರ ಬಗ್ಗೆ ತುಂಬಾ ಕೇಳಿದ್ದೇನೆ'' ಎಂದರು.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
ಅಂದ್ಹಾಗೆ, ಪ್ರಿಯಾ ಪ್ರಕಾಶ್ ವಾರಿಯರ್ ಕೆ ಮಂಜು ಮಗ ನಟಿಸುತ್ತಿರುವ ವಿಷ್ಣುಪ್ರಿಯ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಬಹುತೇಕ ಮುಗಿದಿದೆಯಂತೆ. ಮೊದಲ ಸಿನಿಮಾ ರಿಲೀಸ್ ಗೂ ಮೊದಲೇ ಎರಡನೇ ಚಿತ್ರ ಸೆಟ್ಟೇರಿರುವುದು ಮತ್ತಷ್ಟು ಸಂಭ್ರಮ ಹೆಚ್ಚಿಸಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.