Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗವಾರದ ಜನತೆಗೆ 'ಆಸರೆ'ಯಾದ ಹ್ಯಾಟ್ರಿಕ್ ಹೀರೋ 'ಶಿವಣ್ಣ 'ಬಾಯ್ಸ್
ಕೊರೊನಾ ವೈರಸ್ ಹಾಗೂ ಲಾಕ್ಡೌನ್ನಿಂದ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಚಿತ್ರರಂಗದಿಂದ ಹಲವರು ಸಹಾಯ ಮಾಡ್ತಿದ್ದಾರೆ. ತಮ್ಮದೇ ಫೌಂಡೇಶನ್, ತಂಡ ಕಟ್ಟಿಕೊಂಡು ಹಸಿದವರಿಗೆ ಊಟ, ದಿನಸಿ ಕಿಟ್, ಆಕ್ಸಿಜನ್, ಆಂಬುಲೆನ್ಸ್ ವ್ಯವಸ್ಥೆ ಹೀಗೆ ಒಂದಲ್ಲ ಒಂದು ರೀತಿ ನೆರವು ಕೊಡ್ತಿದ್ದಾರೆ.
Recommended Video
ಇದೀಗ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವ ಜನರ ಸಹಾಯಕ್ಕೆ ಧಾವಿಸಿದ್ದಾರೆ. ನಾಗವಾರದ ಸುತ್ತಮುತ್ತ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ 'ಆಸರೆ' ಎಂಬ ಹೆಸರಿನಲ್ಲಿ ಸಹಾಯ ಮಾಡ್ತಿದ್ದಾರೆ..
ಕೊರೊನಾ ಸಂಕಷ್ಟ: ಸ್ಟಾರ್ ನಟರ ಅಭಿಮಾನಿಗಳಿಂದ ಮಹತ್ವದ ಕೆಲಸ
ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ 500 ಜನರಿಗೆ ಊಟ, ತಿಂಡಿ, ಹಾಗೂ ಟೀ ವ್ಯವಸ್ಥೆಯನ್ನ ಮಾಡಿದ್ದಾರೆ. ಈ ಕೆಲಸಕ್ಕಾಗಿ ಶಿವಣ್ಣ ಬೊಲೆರೊ ಕ್ಯಾಂಟ್ರೋನ ಆರೇಂಜ್ ಮಾಡಿದ್ದು, ಈ ವಾಹನದಲ್ಲೇ ಊಟ ತಿಂಡಿ ಸರಬರಾಜು ಆಗುತ್ತಿದೆ.
"ಆಸರೆ" ಹಸಿದ ಹೊಟ್ಟೆಗೆ ಕೈ ತುತ್ತು ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ, ಸದ್ಯ 10 ದಿನದವರೆಗೂ ಮುಂದುವರೆಯಲಿದೆ. ಲಾಕ್ ಡೌನ್ ಹೀಗೆ ಮುಂದುವರೆದಲ್ಲಿ ಸುಮಾರು 1000 ಜನಕ್ಕೆ ಪ್ರತಿ ದಿನ ಅನ್ನ ದಾಸೋಹ ಮಾಡುವುದಕ್ಕೆ ಶಿವಣ್ಣ, ಗೀತಾ ಶಿವಣ್ಣ ಹಾಗೂ ಶಿವಣ್ಣ ಬಾಯ್ಸ್ ಯೋಜನೆ ರೂಪಿಸಿಕೊಂಡಿದ್ದಾರೆ.
ಇನ್ನು ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ವತಿಯಿಂದ ಕಿಚ್ಚನ ಕೈ ತುತ್ತು ಎಂಬ ಯೋಜನೆ ಚಾಲ್ತಿಯಲ್ಲಿದೆ. ಉಪೇಂದ್ರ ಅವರು ಖುದ್ದು ದೇಣಿಗೆ ಸಂಗ್ರಹಿಸಿ ಜನರಿಗೆ ಅಗತ್ಯ ದಿನಸಿ ಹಂಚುತ್ತಿದ್ದಾರೆ. ಭುವನ್ ಪೊನ್ನಣ್ಣ, ಹರ್ಷಿಕಾ ಉಚಿತ ಆಕ್ಸಿಜನ್ ಹಾಗೂ ಆಟೋ ವ್ಯವಸ್ಥೆ ಮಾಡಿದ್ದಾರೆ.
ನಟಿ ಶುಭ ಪೂಂಜಾ ಅವರು ಜನರಿಗೆ ದಿನಸಿ ಕಿಟ್ ವಿತರಿಸುತ್ತಿದ್ದಾರೆ. ರಾಗಿಣಿ ದ್ವಿವೇದಿ ಆಹಾರದ ಪೊಟ್ಟಣಗಳನ್ನು ಹಂಚಿದ್ದಾರೆ. ಕಿರಣ್ ರಾಜ್ ಸಹ ಊಟದ ವ್ಯವಸ್ಥೆ ಮಾಡಿದ್ದಾರೆ.