Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗವಿಪುರದ ಗಲ್ಲಿಯಲ್ಲಿ ಟಗರು ಶಿವನ ಸಂಚಾರ
ಟಗರು ಸಿನಿಮಾ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರವನ್ನ ಜನರು ಮನಸ್ಸು ಪೂರ್ತಿಯಾಗಿ ಮೆಚ್ಚಿಕೊಂಡಿದ್ದಾರೆ. ಶಿವಣ್ಣನ ಅಭಿನಯ ಡಾಲಿಯ ಆರ್ಭಟ ನಿರ್ದೇಶಕರ ಕೈಚಳಕ ಎಲ್ಲದಕ್ಕೂ ಪ್ರೇಕ್ಷಕ ಜೈಕಾರ ಹಾಕಿದ್ದು ಆಗಿದೆ. ಸಿನಿಮಾವನ್ನ ಪ್ರೀತಿಯಿಂದ ಬರ ಮಾಡಿಕೊಂಡ ಜನರಿಗೆ ನಿರ್ದೇಶಕ ಸೂರಿ ಪತ್ರದ ಮೂಲಕ ಧನ್ಯವಾದ ತಿಳಿಸಿದ್ದರು. ಈಗ ಶಿವಣ್ಣ ಟಗರು ಗೆಲುವಿನ ಸಂಭ್ರಮವನ್ನ ಗವಿಪುರದಲ್ಲಿ ಆಚರಣೆ ಮಾಡಿದ್ದಾರೆ.
ಟಗರು ಸಿನಿಮಾ ಮಹೂರ್ತ ನಡೆದಿದ್ದು ಬಂಡಿ ಮಾಕಳಮ್ಮ ದೇವಸ್ಥಾನದಲ್ಲಿ ಅಷ್ಟೇ ಅಲ್ಲದೆ ಚಿತ್ರದಲ್ಲೂ ಕೆಲ ಸೀನ್ ಗಳನ್ನ ಅಲ್ಲಿಯೇ ಚಿತ್ರೀಕರಿಸಲಾಗಿದೆ. ಸಿನಿಮಾ ಗೆದ್ದ ನಂತರ ಶಿವರಾಜ್ ಕುಮಾರ್ , ಪತ್ನಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕ ಕೆ ಪಿ ಶ್ರೀಕಾಂತ್ ಹಾಗೂ ಚಿತ್ರತಂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ.
'ಟಗರು' ಸಿನಿಮಾದ 'ಕಾನ್ಸ್ ಟೇಬಲ್ ಸರೋಜ' ಯಾರು ಗೊತ್ತಾ ?
ಅದಾದ ನಂತರ ಗಾಂಧಿಬಜಾರ್ ನಲ್ಲಿರುವ ವಿದ್ಯಾರ್ಥಿ ಭವನದಲ್ಲಿ ದೋಸೆ ರುಚಿ ನೋಡಿದ್ದಾರೆ ಶಿವರಾಜ್ ಕುಮಾರ್. ಡಾ ರಾಜ್ ಕುಮಾರ್ ಕೂಡ ವಿದ್ಯಾರ್ಥಿ ಭವನಕ್ಕೆ ಆಗಾಗ ಭೇಟಿ ಕೊಟ್ಟು ದೋಸೆಯ ರುಚಿಯನ್ನ ಸವಿಯುತ್ತಿದ್ದರಂತೆ.
ಒಟ್ಟಾರೆ ಟಗರು ಸಿನಿಮಾದ ಯಶಸ್ಸನ್ನ ಚಿತ್ರತಂಡ ಆಡಂಬರವಿಲ್ಲದೆ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡುವುದ ಜೊತೆಯಲ್ಲಿ ಗೆಲುವಿಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತಿದೆ ಚಿತ್ರತಂಡ.