Just In
Don't Miss!
- Lifestyle
"ಭಾನುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗವಿಪುರದ ಗಲ್ಲಿಯಲ್ಲಿ ಟಗರು ಶಿವನ ಸಂಚಾರ
ಟಗರು ಸಿನಿಮಾ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರವನ್ನ ಜನರು ಮನಸ್ಸು ಪೂರ್ತಿಯಾಗಿ ಮೆಚ್ಚಿಕೊಂಡಿದ್ದಾರೆ. ಶಿವಣ್ಣನ ಅಭಿನಯ ಡಾಲಿಯ ಆರ್ಭಟ ನಿರ್ದೇಶಕರ ಕೈಚಳಕ ಎಲ್ಲದಕ್ಕೂ ಪ್ರೇಕ್ಷಕ ಜೈಕಾರ ಹಾಕಿದ್ದು ಆಗಿದೆ. ಸಿನಿಮಾವನ್ನ ಪ್ರೀತಿಯಿಂದ ಬರ ಮಾಡಿಕೊಂಡ ಜನರಿಗೆ ನಿರ್ದೇಶಕ ಸೂರಿ ಪತ್ರದ ಮೂಲಕ ಧನ್ಯವಾದ ತಿಳಿಸಿದ್ದರು. ಈಗ ಶಿವಣ್ಣ ಟಗರು ಗೆಲುವಿನ ಸಂಭ್ರಮವನ್ನ ಗವಿಪುರದಲ್ಲಿ ಆಚರಣೆ ಮಾಡಿದ್ದಾರೆ.
ಟಗರು ಸಿನಿಮಾ ಮಹೂರ್ತ ನಡೆದಿದ್ದು ಬಂಡಿ ಮಾಕಳಮ್ಮ ದೇವಸ್ಥಾನದಲ್ಲಿ ಅಷ್ಟೇ ಅಲ್ಲದೆ ಚಿತ್ರದಲ್ಲೂ ಕೆಲ ಸೀನ್ ಗಳನ್ನ ಅಲ್ಲಿಯೇ ಚಿತ್ರೀಕರಿಸಲಾಗಿದೆ. ಸಿನಿಮಾ ಗೆದ್ದ ನಂತರ ಶಿವರಾಜ್ ಕುಮಾರ್ , ಪತ್ನಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕ ಕೆ ಪಿ ಶ್ರೀಕಾಂತ್ ಹಾಗೂ ಚಿತ್ರತಂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ.
'ಟಗರು' ಸಿನಿಮಾದ 'ಕಾನ್ಸ್ ಟೇಬಲ್ ಸರೋಜ' ಯಾರು ಗೊತ್ತಾ ?
ಅದಾದ ನಂತರ ಗಾಂಧಿಬಜಾರ್ ನಲ್ಲಿರುವ ವಿದ್ಯಾರ್ಥಿ ಭವನದಲ್ಲಿ ದೋಸೆ ರುಚಿ ನೋಡಿದ್ದಾರೆ ಶಿವರಾಜ್ ಕುಮಾರ್. ಡಾ ರಾಜ್ ಕುಮಾರ್ ಕೂಡ ವಿದ್ಯಾರ್ಥಿ ಭವನಕ್ಕೆ ಆಗಾಗ ಭೇಟಿ ಕೊಟ್ಟು ದೋಸೆಯ ರುಚಿಯನ್ನ ಸವಿಯುತ್ತಿದ್ದರಂತೆ.
ಒಟ್ಟಾರೆ ಟಗರು ಸಿನಿಮಾದ ಯಶಸ್ಸನ್ನ ಚಿತ್ರತಂಡ ಆಡಂಬರವಿಲ್ಲದೆ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡುವುದ ಜೊತೆಯಲ್ಲಿ ಗೆಲುವಿಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತಿದೆ ಚಿತ್ರತಂಡ.