Don't Miss!
- Sports IPL 2024: ಗುಜರಾತ್ ತಂಡಕ್ಕೆ ಕಾಡಲಿದೆಯಾ ಹಾರ್ದಿಕ್ ಅನುಪಸ್ಥಿತಿ; ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್
- News ಬಿಜೆಪಿ ಮೈತ್ರಿ ಧರ್ಮ ಅನುಸರಿಸದಿದ್ರೆ ದಾವಣಗೆರೆಯಲ್ಲಿ ಗೆಲುವು ಕಷ್ಟ: ಜೆಡಿಎಸ್ ಮುಖಂಡರೇ ಹೀಗೆ ಹೇಳಿದ್ಯಾಕೆ?
- Lifestyle 2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕೆಂಡ್ ನಲ್ಲಿ ಮೈಸೂರಿನ ಫ್ಯಾಮಿಲಿ ಜೊತೆ ಶಿವರಾಜ್ ಕುಮಾರ್
ನಟ ಶಿವರಾಜ್ ಕುಮಾರ್ ಈ ವೀಕೆಂಡ್ ಅನ್ನ ಮೈಸೂರಿನ ತಮ್ಮ ಫ್ಯಾಮಿಲಿ ಜೊತೆಯಲ್ಲಿ ಕಳೆದಿದ್ದಾರೆ. ಶಿವಣ್ಣನ ಜೊತೆ ಗೀತಾ ಶಿವರಾಜ್ ಕುಮಾರ್ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದು ವಿಶೇಷವಾಗಿದೆ. ಅದು ಸರಿ ಅಣ್ಣಾವ್ರ ಕಂಪ್ಲೀಟ್ ಫ್ಯಾಮಿಲಿ ಬೆಂಗಳೂರಿನಲ್ಲಿದೆ. ಅದನ್ನ ಬಿಟ್ಟರೆ ಗಾಜನೂರಿನಲ್ಲಿದೆ ಮೈಸೂರಿನಲ್ಲಿ ಯಾರಿದ್ದಾರೆ ಎಂದು ಆಶ್ವರ್ಯ ಪಡಬೇಡಿ.
ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರು ಇತ್ತೀಚಿಗಷ್ಟೇ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಶಕ್ತಿಧಾಮದಲ್ಲಿರುವ ಮಕ್ಕಳ ಜೊತೆ ಶಿವರಾಜ್ ಕುಮಾರ್ ಸಾಕಷ್ಟು ಸಮಯ ಕಳೆದಿದ್ದಾರೆ.
ಶುರುವಾಯ್ತು ಶಿವಣ್ಣ ಹಾಗೂ ಸುದೀಪ್ ನಡುವೆ ಕಾಳಗ
ಪಾರ್ವತಮ್ಮ ರಾಜ್ ಕುಮಾರ್ ಪ್ರಾರಂಭ ಮಾಡಿದ ಶಕ್ತಿಧಾಮ ಸಂಸ್ಥೆಯನ್ನ ಈಗ ಪುನೀತ್ ರಾಜ್ ಕುಮಾರ್ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತ ಹೆಂಗಸರು ಹಾಗೂ ಮಕ್ಕಳಿಗೆ ಶಕ್ತಿಧಾಮದಲ್ಲಿ ಆಸರೆ ನೀಡಲಾಗುತ್ತಿದೆ.
ಶಕ್ತಿಧಾಮದ ಮಕ್ಕಳ ಜೊತೆ ಕಾಲ ಕಳೆದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಮಕ್ಕಳಿಗಾಗಿ ಅನೇಕ ಉಡುಗೊರೆಗಳನ್ನ ನೀಡಿದ್ದಾರೆ. ಅಲ್ಲಿಯ ಮಕ್ಕಳು ಕೂಡ ಹ್ಯಾಟ್ರಿಕ್ ಹೀರೋ ಅವರನ್ನ ನೋಡಿ ಸಖತ್ ಖುಷಿ ಆಗಿದ್ದಾರೆ. ಇತ್ತೀಚಿಗಷ್ಟೇ ಪುನೀತ್ ರಾಜ್ ಕುಮಾರ್ ಕೂಡ ಶಕ್ತಿಧಾಮಕ್ಕೆ ಭೇಟಿ ನೀಡಿದ್ದರು.