Just In
- 43 min ago
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- 1 hr ago
'ದಳಪತಿ 65' ಸಿನಿಮಾಗೆ ಇವರೇ ನಾಯಕಿ; ಟ್ವಿಟ್ಟರ್ ನಲ್ಲಿ ಅಭಿಮಾನಿಗಳ ಟ್ರೆಂಡ್
- 2 hrs ago
ಶಿವಣ್ಣನಿಗೆ ಕೃಷ್ಣ-ಮಿಲನಾ ಜೋಡಿಯ ಮದುವೆ ಆಮಂತ್ರಣ- ಡಿ ಬಾಸ್ ಗೆ ಯಾವಾಗ ಕೊಡ್ತೀರಾ ಎನ್ನುತ್ತಿದ್ದಾರೆ ಅಭಿಮಾನಿಗಳು
- 10 hrs ago
ಮತ್ತೆ ಬಾಲಿವುಡ್ಗೆ ಪಯಣ ಬೆಳೆಸಿದ ದುಲ್ಕರ್ ಸಲ್ಮಾನ್
Don't Miss!
- Finance
"ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲಿನ ನಗದು ಸಾಲಕ್ಕೆ ಬಡ್ಡಿ ಇಲ್ಲ"
- News
ನಷ್ಟದಲ್ಲಿದ್ದ ನಮ್ಮ ಮೆಟ್ರೋಗೆ ವರವಾದ ವಿದ್ಯಾರ್ಥಿಗಳು
- Sports
ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್
- Automobiles
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಮ್ಮನ ಕಂಚಿನ ಪುತ್ಥಳಿ ನೋಡಿ ಸಂತಸಪಟ್ಟ ಶಿವಣ್ಣ ಬ್ರದರ್ಸ್
ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿ ಇತ್ತೀಚಿಗಷ್ಟೆ ಉದ್ಘಾಟನೆಯಾಗಿದೆ. ಬೆಂಗಳೂರಿನ ಯಡಿಯೂರು ವಾರ್ಡ್ ವ್ಯಾಪ್ತಿಯ ಡಾ. ಪಾರ್ವತಮ್ಮ ರಾಜ್ ಕುಮಾರ್ ರಸ್ತೆ ಹಾಗೂ ಸೌತ್ ಎಂಡ್ ವೃತ್ತ ಒಂದುಗೂಡುವ ಸ್ಥಳದಲ್ಲಿ ಪುತ್ಥಳಿ ನಿರ್ಮಿಸಲಾಗಿದೆ.
ಇತ್ತೀಚಿಗಷ್ಟೆ ಲೋಕಾರ್ಪಣೆಯಾದ ಪುತ್ಥಳಿಯನ್ನು ಇಂದು ಶಿವಣ್ಣ ಬ್ರದರ್ಸ್ ನೋಡಿ ಸಂತಸ ಪಟ್ಟಿದ್ದಾರೆ. ಹೌದು, ಉದ್ಘಾಟನೆ ವೇಳೆ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಬೆಂಗಳೂರಿನಲ್ಲಿ ಇರಲಿಲ್ಲ. ಚಿತ್ರೀಕರಣ ನಿಮಿತ್ತ ಶಿವಣ್ಣ ಮಂಗಳೂರನಲ್ಲಿ ಇದ್ರೆ, ಪುನೀತ್ ರಾಜ್ ಕುಮಾರ್ ಚನ್ನೈನಲ್ಲಿ ಇದ್ದರಂತೆ.
ಪಾರ್ವತಮ್ಮ ರಾಜ್ ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಹಾಗಾಗಿ ಇಂದು ಪಾರ್ವತಮ್ಮ ಅವರ ಕಂಚಿನ ಪ್ರತಿಮೆ ಇರುವ ಜಾಗಕ್ಕೆ ಭೇಟಿ ನೀಡಿ, ಅಮ್ಮನ ಪ್ರತಿಮೆಯನ್ನು ನೋಡಿ ಖುಷಿ ಪಟ್ಟಿದ್ದಾರೆ. ಈ ಸಮಯದಲ್ಲಿ ಪ್ರತಿಮೆ ನಿರ್ಮಾಣದ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟ್ ಎನ್ ಆರ್ ರಮೇಶ್ ಕೂಡ ಹಾಜರಿದ್ದರು.
ಡಾ. ಪಾರ್ಮತಮ್ಮ ಅವರ ಎರಡನೆ ಪುಣ್ಯ ತಿಥಿಯ ದಿನ ಈ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಕಂಚಿನ ಪ್ರತಿಮೆಯನ್ನು ಸುಮಾರು 10ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕನ್ನಡ ಚಲನಚಿತ್ರ ಇತಿಹಾಸದಲ್ಲೆ ಮೊದಲ ಬಾರಿಗೆ ನಿರ್ಮಾಪಕಿಯೊಬ್ಬರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿರುವುದು ವಿಶೇಷ.