twitter
    For Quick Alerts
    ALLOW NOTIFICATIONS  
    For Daily Alerts

    ಅಮ್ಮನ ಕಂಚಿನ ಪುತ್ಥಳಿ ನೋಡಿ ಸಂತಸಪಟ್ಟ ಶಿವಣ್ಣ ಬ್ರದರ್ಸ್

    |

    Recommended Video

    ಇದು ಕರ್ನಾಟಕದ ಮೊದಲ ಪ್ರತಿಮೆ..? | FILMIBEAT KANNADA

    ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿ ಇತ್ತೀಚಿಗಷ್ಟೆ ಉದ್ಘಾಟನೆಯಾಗಿದೆ. ಬೆಂಗಳೂರಿನ ಯಡಿಯೂರು ವಾರ್ಡ್ ವ್ಯಾಪ್ತಿಯ ಡಾ. ಪಾರ್ವತಮ್ಮ ರಾಜ್ ಕುಮಾರ್ ರಸ್ತೆ ಹಾಗೂ ಸೌತ್ ಎಂಡ್ ವೃತ್ತ ಒಂದುಗೂಡುವ ಸ್ಥಳದಲ್ಲಿ ಪುತ್ಥಳಿ ನಿರ್ಮಿಸಲಾಗಿದೆ.

    ಇತ್ತೀಚಿಗಷ್ಟೆ ಲೋಕಾರ್ಪಣೆಯಾದ ಪುತ್ಥಳಿಯನ್ನು ಇಂದು ಶಿವಣ್ಣ ಬ್ರದರ್ಸ್ ನೋಡಿ ಸಂತಸ ಪಟ್ಟಿದ್ದಾರೆ. ಹೌದು, ಉದ್ಘಾಟನೆ ವೇಳೆ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಬೆಂಗಳೂರಿನಲ್ಲಿ ಇರಲಿಲ್ಲ. ಚಿತ್ರೀಕರಣ ನಿಮಿತ್ತ ಶಿವಣ್ಣ ಮಂಗಳೂರನಲ್ಲಿ ಇದ್ರೆ, ಪುನೀತ್ ರಾಜ್ ಕುಮಾರ್ ಚನ್ನೈನಲ್ಲಿ ಇದ್ದರಂತೆ.

    ಪಾರ್ವತಮ್ಮ ರಾಜ್ ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ ಪಾರ್ವತಮ್ಮ ರಾಜ್ ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ

    ಹಾಗಾಗಿ ಇಂದು ಪಾರ್ವತಮ್ಮ ಅವರ ಕಂಚಿನ ಪ್ರತಿಮೆ ಇರುವ ಜಾಗಕ್ಕೆ ಭೇಟಿ ನೀಡಿ, ಅಮ್ಮನ ಪ್ರತಿಮೆಯನ್ನು ನೋಡಿ ಖುಷಿ ಪಟ್ಟಿದ್ದಾರೆ. ಈ ಸಮಯದಲ್ಲಿ ಪ್ರತಿಮೆ ನಿರ್ಮಾಣದ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟ್ ಎನ್ ಆರ್ ರಮೇಶ್ ಕೂಡ ಹಾಜರಿದ್ದರು.

    shivaraj kumar and Puneeth Rajkumar watched Parvathamma bronze statue

    ಡಾ. ಪಾರ್ಮತಮ್ಮ ಅವರ ಎರಡನೆ ಪುಣ್ಯ ತಿಥಿಯ ದಿನ ಈ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಕಂಚಿನ ಪ್ರತಿಮೆಯನ್ನು ಸುಮಾರು 10ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕನ್ನಡ ಚಲನಚಿತ್ರ ಇತಿಹಾಸದಲ್ಲೆ ಮೊದಲ ಬಾರಿಗೆ ನಿರ್ಮಾಪಕಿಯೊಬ್ಬರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿರುವುದು ವಿಶೇಷ.

    English summary
    Kannada actor shivaraj kumar and Puneeth Rajkumar watched Parvathamma's bronze statue. This statue inaugurated by G Parameshwar on Parvathamma death anniversary.
    Sunday, June 2, 2019, 16:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X