Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ಬಿಡುಗಡೆ ಮುಂಚೆಯೇ ಥಿಯೇಟರ್ ಮುಂದೆ ಶಿವಣ್ಣನ ಕಟೌಟ್
ಕನ್ನಡ ಸಿನಿಮಾ ಪ್ರೇಕ್ಷಕರಲ್ಲಿ ಭಾರಿ ಕೌತುಕವನ್ನ ಹುಟ್ಟುಹಾಕಿರುವ ಹ್ಯಾಟ್ರಿಕ್ ಹೀರೋ ಅಭಿನಯದ ಟಗರು ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ದಿನದಿಂದ ದಿನಕ್ಕೆ ಚಿತ್ರದ ಬಗ್ಗೆ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ.
ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡುಗಳು ಈಗಾಗಲೇ ಹಿಟ್ ಆಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಟಗರು ಸಿನಿಮಾ ಬಿಡುಗಡೆಗೆ ಮುಂಚೆಯೇ ಟಗರು2 ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಇವೆಲ್ಲವುದರ ಮಧ್ಯೆ ಸಿನಿಮಾ ಬಿಡುಗಡೆ ದಿನಾಂಕ ನಿಗಧಿಯಾಗುವ ಮುನ್ನವೇ ಚಿತ್ರಮಂದಿರಗಳ ಮುಂದೆ ಸಂಭ್ರಮಾಚರಣೆ ಶುರುವಾಗಿದೆ. ಹೇಗಿದೆ ಟಗರು ಸಿನಿಮಾ ಕ್ರೇಜ್? ಎಷ್ಟು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆಗಳಿವೆ? ಸಂಪೂರ್ಣ ಮಾಹಿತಿ ಇಲ್ಲಿದೆ.
ಟಗರು ಚಿತ್ರಕ್ಕೆ ಹೆಚ್ಚಾಯ್ತು ನಿರೀಕ್ಷೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಬಿಡುಗಡೆ ಆಗಲಿರುವ ಟಗರು ಸಿನಿಮಾಗೆ ನಿರೀಕ್ಷೆಗಳು ಹೆಚ್ಚಾಗಿದೆ. ಕನ್ನಡ ಸಿನಿಮಾರಂಗದಲ್ಲಿ ಮಾತ್ರವಲ್ಲದೆ ಪರಭಾಷೆಯ ಚಿತ್ರರಂಗದಲ್ಲೂ ಟಗರು ಸಿನಿಮಾಗೆ ಭಾರಿ ಬೇಡಿಕೆ ಬಂದಿದೆ.
ಬಿಡುಗಡೆಗೂ ಮುನ್ನವೇ ಕಟೌಟ್
ಸಿನಿಮಾಗಳ ಬಿಡುಗಡೆಯ ದಿನಾಂಕ ನಿಗಧಿ ಆದ ನಂತರ ಚಿತ್ರಮಂದಿರಗಳ ಮುಂದೆ ಕಟೌಟ್ ಗಳು ನಿಲ್ಲುವುದು ಸಾಮಾನ್ಯ. ಆದರೆ ಟಗರು ಸಿನಿಮಾ ಇನ್ನೂ ಸೆನ್ಸಾರ್ ಹಂತದಲ್ಲಿರುವಾಗಲೇ ಥಿಯೇಟರ್ ಗಳ ಮುಂದೆ ಕಟೌಟ್ ನಿಲ್ಲಿಸಲು ಶುರು ಮಾಡಿದ್ದಾರೆ ಅಭಿಮಾನಿಗಳು.
ಊರ್ವಶಿ ಚಿತ್ರಮಂದಿರದಲ್ಲಿ ಸಂಭ್ರಮ
ಟಗರು ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಆದರೆ ಅಭಿಮಾನಿಗಳು ಫೆಬ್ರವರಿ ಎರಡನೇ ವಾರದಲ್ಲಿ ಚಿತ್ರ ರಿಲೀಸ್ ಆಗುತ್ತದೆ ಎಂದು ಈಗಾಗಲೇ ಊರ್ವಶಿ ಚಿತ್ರಮಂದಿರ ಮುಂದೆ ಕಟೌಟ್ ಮತ್ತು ಪೋಸ್ಟರ್ ಗಳನ್ನ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ.
ಅದ್ಧೂರಿ ಮೇಕಿಂಗ್ ಸಿನಿಮಾ ಟಗರು
ಟಗರು ಅದ್ದೂರಿ ಮೇಕಿಂಗ್ ಮತ್ತು ಬಹು ತಾರಾಗಣವಿರುವ ಚಿತ್ರ. ಶಿವರಾಜ್ ಕುಮಾರ್, ಭಾವನಾ, ಮಾನ್ವಿತಾ ಹರೀಶ್, ಧನಂಜಯ ಹಾಗೂ ವಶಿಷ್ಠ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕೆ ಪಿ ಶ್ರೀಕಾಂತ್ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಕಡ್ಡಿಪುಡಿ ಸಿನಿಮಾ ನಂತರ ದುನಿಯಾ ಸೂರಿ ಮತ್ತೆ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶನ ಮಾಡಿದ್ದಾರೆ.