Just In
Don't Miss!
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Finance
ಮಾರ್ಚ್ 04ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Automobiles
ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿತ್ರ ಬಿಡುಗಡೆ ಮುಂಚೆಯೇ ಥಿಯೇಟರ್ ಮುಂದೆ ಶಿವಣ್ಣನ ಕಟೌಟ್
ಕನ್ನಡ ಸಿನಿಮಾ ಪ್ರೇಕ್ಷಕರಲ್ಲಿ ಭಾರಿ ಕೌತುಕವನ್ನ ಹುಟ್ಟುಹಾಕಿರುವ ಹ್ಯಾಟ್ರಿಕ್ ಹೀರೋ ಅಭಿನಯದ ಟಗರು ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ದಿನದಿಂದ ದಿನಕ್ಕೆ ಚಿತ್ರದ ಬಗ್ಗೆ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ.
ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡುಗಳು ಈಗಾಗಲೇ ಹಿಟ್ ಆಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಟಗರು ಸಿನಿಮಾ ಬಿಡುಗಡೆಗೆ ಮುಂಚೆಯೇ ಟಗರು2 ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಇವೆಲ್ಲವುದರ ಮಧ್ಯೆ ಸಿನಿಮಾ ಬಿಡುಗಡೆ ದಿನಾಂಕ ನಿಗಧಿಯಾಗುವ ಮುನ್ನವೇ ಚಿತ್ರಮಂದಿರಗಳ ಮುಂದೆ ಸಂಭ್ರಮಾಚರಣೆ ಶುರುವಾಗಿದೆ. ಹೇಗಿದೆ ಟಗರು ಸಿನಿಮಾ ಕ್ರೇಜ್? ಎಷ್ಟು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆಗಳಿವೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಟಗರು ಚಿತ್ರಕ್ಕೆ ಹೆಚ್ಚಾಯ್ತು ನಿರೀಕ್ಷೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಬಿಡುಗಡೆ ಆಗಲಿರುವ ಟಗರು ಸಿನಿಮಾಗೆ ನಿರೀಕ್ಷೆಗಳು ಹೆಚ್ಚಾಗಿದೆ. ಕನ್ನಡ ಸಿನಿಮಾರಂಗದಲ್ಲಿ ಮಾತ್ರವಲ್ಲದೆ ಪರಭಾಷೆಯ ಚಿತ್ರರಂಗದಲ್ಲೂ ಟಗರು ಸಿನಿಮಾಗೆ ಭಾರಿ ಬೇಡಿಕೆ ಬಂದಿದೆ.

ಬಿಡುಗಡೆಗೂ ಮುನ್ನವೇ ಕಟೌಟ್
ಸಿನಿಮಾಗಳ ಬಿಡುಗಡೆಯ ದಿನಾಂಕ ನಿಗಧಿ ಆದ ನಂತರ ಚಿತ್ರಮಂದಿರಗಳ ಮುಂದೆ ಕಟೌಟ್ ಗಳು ನಿಲ್ಲುವುದು ಸಾಮಾನ್ಯ. ಆದರೆ ಟಗರು ಸಿನಿಮಾ ಇನ್ನೂ ಸೆನ್ಸಾರ್ ಹಂತದಲ್ಲಿರುವಾಗಲೇ ಥಿಯೇಟರ್ ಗಳ ಮುಂದೆ ಕಟೌಟ್ ನಿಲ್ಲಿಸಲು ಶುರು ಮಾಡಿದ್ದಾರೆ ಅಭಿಮಾನಿಗಳು.

ಊರ್ವಶಿ ಚಿತ್ರಮಂದಿರದಲ್ಲಿ ಸಂಭ್ರಮ
ಟಗರು ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಆದರೆ ಅಭಿಮಾನಿಗಳು ಫೆಬ್ರವರಿ ಎರಡನೇ ವಾರದಲ್ಲಿ ಚಿತ್ರ ರಿಲೀಸ್ ಆಗುತ್ತದೆ ಎಂದು ಈಗಾಗಲೇ ಊರ್ವಶಿ ಚಿತ್ರಮಂದಿರ ಮುಂದೆ ಕಟೌಟ್ ಮತ್ತು ಪೋಸ್ಟರ್ ಗಳನ್ನ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ.

ಅದ್ಧೂರಿ ಮೇಕಿಂಗ್ ಸಿನಿಮಾ ಟಗರು
ಟಗರು ಅದ್ದೂರಿ ಮೇಕಿಂಗ್ ಮತ್ತು ಬಹು ತಾರಾಗಣವಿರುವ ಚಿತ್ರ. ಶಿವರಾಜ್ ಕುಮಾರ್, ಭಾವನಾ, ಮಾನ್ವಿತಾ ಹರೀಶ್, ಧನಂಜಯ ಹಾಗೂ ವಶಿಷ್ಠ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕೆ ಪಿ ಶ್ರೀಕಾಂತ್ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಕಡ್ಡಿಪುಡಿ ಸಿನಿಮಾ ನಂತರ ದುನಿಯಾ ಸೂರಿ ಮತ್ತೆ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶನ ಮಾಡಿದ್ದಾರೆ.