Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ವೃತ್ತಿಜೀವನಕ್ಕೆ ಭರ್ಜರಿ ಸಕ್ಸಸ್ ನೀಡುವ ಚಿತ್ರವಿದುವಾ?
ಸಾಮಾಜಿಕ ಕಳಕಳಿಯ ಚಿತ್ರ ಇದಾಗಿದ್ದು, ಮಕ್ಕಳನ್ನು ಭಿಕ್ಷಾಟನೆಗೆ ದೂಡುವ ಮಾಫಿಯಾದ ವಿರುದ್ದ ನಾಯಕ ಸಮರ ಸಾರುವ ದೃಶ್ಯಗಳು ಚಿತ್ರದಲ್ಲಿವೆ.ಭಿಕ್ಷಾಟನೆ ನಿರ್ಮೂಲನೆ ಬಗ್ಗೆ ಬರೀ ಮಾತನಾಡುವ ನಮ್ಮ ರಾಜಕಾರಿಣಿಗಳು ಅದರ ಬಗ್ಗೆ ಕಿಂಚಿತ್ತೂ ಕಾಳಜಿ ಹೊಂದಿಲ್ಲ. ಇಂತಹ ಮಕ್ಕಳನ್ನು ದಿನಕ್ಕೆ ಎಂಟು ಗಂಟೆಗಳ ಕಾಲ ದುಡಿಸಲಾಗುತ್ತೆ. ಬೇರೆ ಬೇರೆ ರಾಜ್ಯಗಳಿಂದ ಮಕ್ಕಳನ್ನು ಕಿಡ್ನಾಪ್ ಮಾಡಿ ಭಿಕ್ಷಾಟನೆಗೆ ದೂಡಲಾಗುತ್ತದೆ. ನನ್ನ ಈ ಚಿತ್ರದಲ್ಲಿ ಸಮಾಜಕ್ಕೆ ತೊಂದರೆ ನೀಡುವ ಇಂತಹ ಘಟನೆಗಳ ಬಗ್ಗೆ ತೋರಿಸಿದ್ದೇನೆ ಎಂದು ನಿರ್ದೇಶಕ ಓಂ ಪ್ರಕಾಶ್ ಹೇಳಿದ್ದಾರೆ.
ಕ್ಲಾಸ್ ಪ್ರೇಕ್ಷಕರಿಗಾಗಿ ಶಿವ ಎರಡು ಕಣ್ಣು ತೆರೆಯುತ್ತಾನೆ, ಮಾಸ್ ಪ್ರೇಕ್ಷಕರಿಗೆ ಮೂರನೇ ಕಣ್ಣನ್ನು ತೆರೆಯುತ್ತಾನೆ, ಮೂರೂ ಕಣ್ಣು ಒಟ್ಟಿಗೆ ತೆರೆದಾಗ ಸಮಾಜಘಾತುಕರು ಕಲ್ಲಾಸ್ ಎನ್ನುತ್ತಾರೆ ನಿರ್ದೇಶಕರು. ರಾಕ್ ಲೈನ್ ಸ್ಟುಡಿಯೋದಲ್ಲಿ ಭಿಕ್ಷುಕರ ಕಾಲನಿಯ ಸೆಟ್ ಹಾಕಿ ವಿಭಿನ್ನ ರೀತಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಖಂಡಿತ ಗೆಲ್ಲುತ್ತದೆ ಎನ್ನುವ ಭರವಸೆಯ ಮಾತನ್ನು ನಿರ್ದೇಶಕರಾಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲು ರೈಲ್ವೆ ಹಳಿಯಲ್ಲಿ ನಿಂತಿರುವ ಯುವಕನನ್ನು ರಕ್ಷಿಸುವ ಮೂಲಕ ಶಿವಣ್ಣ ತೆರೆಗೆ ಎಂಟ್ರಿ ಕೊಡಲಿದ್ದಾರೆ. ಶಿವಣ್ಣ ವೃತ್ತಿಪರ ಜಾಕಿ (ಕುದುರೆಸವಾರ) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೆ ಪಿ ಶ್ರೀಕಾಂತ್ ನಿರ್ಮಾಣದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಉಳಿದ ತಾರಾಗಣದಲ್ಲಿ ಬುಲೆಟ್ ಪ್ರಕಾಶ್, ಶೋಭರಾಜ್ ಇನ್ನಿತರರಿದ್ದಾರೆ. ಪಳನಿರಾಜ್ ಚಿತ್ರದ ಸಾಹಸ ನಿರ್ದೇಶಕರು
ವಿಶಿಷ್ಟ ರೀತಿಯಲ್ಲಿ ಆಡಿಯೋ ಬಿಡುಗಡೆಗೆ ಮುಂದಾಗಿರುವ ಚಿತ್ರತಂಡ ಇಂದು ( ಮೇ 30) ಬೆಂಗಳೂರು ನಗರದ ಎಳುಕಡೆ (ಗಾಂಧಿನಗರ, ವಿಜಯನಗರ, ಮಲ್ಲೇಶ್ವರಂ, ಇಂದಿರಾನಗರ, ಗಿರಿನಗರ, ಹನುಮಂತನಗರ ಮತ್ತು ರಾಜಾಜಿನಗರ) ಬೇರೆ ಬೇರೆ ಸಮಯದಲ್ಲಿ ಅಭಿಮಾನಿಗಳ ಮುಂದೆ ಬಿಡುಗಡೆ ಮಾಡಲಿದ್ದಾರೆ. ಅಲ್ಲದೆ ಶಿವಣ್ಣ ಅಭಿಮಾನಿಗಳ ಸಂಘ 16 ಜಿಲ್ಲಾ ಕೇಂದ್ರದಲ್ಲಿ ಕ್ಯಾಸೆಟ್ ಬಿಡುಗಡೆ ಸಮಾರಂಭ ಆಯೋಜಿಸಿದೆ.
ಶಿವ ಚಿತ್ರದ ಟಿವಿ ರೈಟ್ಸ್ ಎರಡೂವರೆ ಕೋಟಿಗೆ ಮಾರಾಟವಾಗಿದೆ ಎನ್ನಲಾಗಿದೆ. ಎಕೆ 47 ನಂತರ ಓಂ ಪ್ರಕಾಶ್ ರಾವ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ನಟಿಸುವ ಚಿತ್ರ ಇದಾಗಿದೆ.
ಶಿವ, ultimate rider ಚಿತ್ರದ ಧ್ವನಿಸುರುಳಿ ವಿಮರ್ಶೆ ನಿರೀಕ್ಷಿಸಿ...