Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವರಾಜ್ ಕುಮಾರ್ 'ಶಿವಪ್ಪ' ಸಿನಿಮಾದ ಟೈಟಲ್ ಬದಲಾವಣೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಿವಪ್ಪ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ನಡುವೆ ಶಿವಪ್ಪ ಸಿನಿಮಾದ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ.
ನಿರ್ದೇಶಕ ವಿಜಯ್ ಮಿಲ್ಟನ್ ಸಾರಥ್ಯದಲ್ಲಿ ಮೂಡಬಿರುತ್ತಿರುವ ಶಿವಪ್ಪ ಸಿನಿಮಾದ ಟೈಟಲ್ ಬದಲಾವಣೆ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ. ಈ ಬಗ್ಗೆ ಸ್ವತಃ ಶಿವಣ್ಣ ಟಿವಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಶಿವಪ್ಪ ಸಿನಿಮಾಗೆ ಹೊಸ ಶೀರ್ಷಿಕೆ ಇಡುವುದಾಗಿ ಬಹಿರಂಗ ಪಡಿಸಿದ್ದಾರೆ.
ತೆಲುಗು ಟಾಪ್ ಗಾಯಕನ ದನಿಯಲ್ಲಿ ಮೂಡಿಬಂತು 'ಭಜರಂಗಿ' ಮೆಲೋಡಿ ಹಾಡು
ಆದರೆ ಟೈಟಲ್ ಏನು ಇನ್ನುವುದು ಇನ್ನು ರಿವೀಲ್ ಆಗಿಲ್ಲ. ಈ ಸಿನಿಮಾ ಸ್ವಲ್ಪ ಹಳ್ಳಿ ಬ್ಯಾಕ್ ಡ್ರಾಪ್ನಲ್ಲಿ ಮೂಡಿಬರುತ್ತಿದೆ. ಶಿವರಾಜ್ ಕುಮಾರ್ ಸಖತ್ ರಗಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಭಜರಂಗಿ-2 ಸಿವಿಮಾದ ಚಿತ್ರೀಕರಣ ಮುಗಿಸಿರುವ ಶಿವಣ್ಣ ಸದ್ಯ ಶಿವಪ್ಪ ಚಿತ್ರೀಕರಣದಲ್ಲಿದ್ದಾರೆ.
ಚಿತ್ರದಲ್ಲಿ ದಿಯಾ ಖ್ಯಾತಿ ಪೃಥ್ವಿ ಅಂಬರ್, ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ವಿಶೇಷ ಎಂದರೆ ಹಿರಿಯ ನಟ ಶಿಶಿಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ಟಗರು ಸಿನಿಮಾದ ಬಳಿಕ ಧನಂಜಯ್ ಮತ್ತೆ ಶಿವರಾಜ್ ಕುಮಾರ್ ಜೊತೆ ನಟಿಸುತ್ತಿದ್ದಾರೆ.
ಇನ್ನು ಇತ್ತೀಚಿಗಷ್ಟೆ ಶಿವಣ್ಣ 125ನೇ ಸಿನಿಮಾ ಅನೌನ್ಸ್ ಮಾಡಿದ್ದು, ವೇದ ಎಂದು ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ ಎ ಹರ್ಷ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
Recommended Video
ಶಿವಣ್ಣ ಕೊನೆಯದಾಗಿ ದ್ರೋಣ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇದೀಗ ಭಜರಂಗಿ-2 ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಆದರೆ ಕೊರೊನಾ ಹಾವಳಿಯಿಂದ ಸಿನಿಮಾ ರಿಲೀಸ್ ತಡವಾಗುವ ಸಾದ್ಯತೆ ಇದೆ.