Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷಿ ಮೇಳದಲ್ಲಿ ಶಿವಣ್ಣ ರಂಗು: ಹಾಡಿ, ಡ್ಯಾನ್ಸ್ ಮಾಡಿ ರಂಜಿಸಿದ ಹ್ಯಾಟ್ರಿಕ್ ಹೀರೋ, ವಿಡಿಯೋ ವೈರಲ್
ರಾಜ್ಯಮಟ್ಟದ ಕೃಷಿಮೇಳ ಹೊನ್ನಾಳಿಯಲ್ಲಿ ನಡೆಯುತ್ತಿದೆ. ಡಾ. ಶಿವರಾಜ್ ಕುಮಾರ್, ಯೋಗ ಗುರು ಬಾಬಾ ರಾಮದೇವ್, ಕಾಶಿ ಜಗದ್ಗುರು ಕೃಷಿ ಮೇಳಕ್ಕೆ ಅದ್ದೂರಿ ಚಾಲನೆ ನೀಡಿದರು. ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೂರು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ.
Recommended Video
ಚಾಲನೆ ನೀಡಿ ಮಾತನಾಡಿದ ಶಿವಣ್ಣ "ಗಡಿಯಲ್ಲಿ ಯೋಧ ದೇಶ ಕಾಪಾಡುತ್ತಾರೆ. ಹಾಗೆ ರೈತ ಕೃಷಿ ಮಾಡುತ್ತಾರೆ. ಯೋಧ ಮತ್ತು ರೈತ ಎರಡು ಕಣ್ಣುಗಳಿದ್ದಂತೆ. ಯಾವುದೆ ಕಣ್ಣಿಗೆ ನೋವಾದರು ಕಷ್ಟವಾಗುತ್ತೆ. ಎಂದು ಹೇಳಿದರು. ಇನ್ನು ಅಪ್ಪಾಜಿ ಬಂಗಾರದ ಮನುಷ್ಯ ಸಿನಿಮಾದಲ್ಲಿ ರೈತನಾಗಿದ್ದರು. ರೈತರ ಬಗ್ಗೆ ಅಪಾರವಾದ ಗೌರವಿದೆ. ಯಾವುದೆ ಕಾರಣಕ್ಕೂ ರೈತ ಸಾಯೋ ಮಾತಾನಾಡಬಾರದು" ಎಂದರು.
ಅಯ್ಯಪ್ಪ ಮಾಲೆ ಧರಿಸಿದ ನಟ ಶಿವರಾಜ್ ಕುಮಾರ್, ನಿರ್ದೇಶಕ ರಘುರಾಮ್
ಜೊತೆಗೆ 'ಆಗದು ಎಂದು ಕೈಕಟ್ಟಿಕುಳಿತರೆ' ಹಾಡಿನ ಮೂಲಕ ರೈತರಿಗೆ ಮತ್ತಷ್ಟು ಧೈರ್ಯ ತುಂಬಿದರು. ಶಿವಣ್ಣ ಮಾತಿನ ಜೊತೆಗೆ ಹಾಡುಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು. ಜೊತೆಗೆ ಟಗರು ಹಾಡಿಗೆ ಹೆಜ್ಜೆ ಹಾಕಿದ ಶಿವಣ್ಣ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.
ಶಿವಣ್ಣ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಬಾಬಾ ರಾಮ್ ದೇವ ಮಾತನಾಡಿ, ಕರ್ನಾಟಕ ಜನ ರಾಷ್ಟ್ರಭಕ್ತಿ ಹಾಗೂ ಆಧ್ಯಾತ್ಮದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ ಎಂದು ಕನ್ನಡದಲ್ಲಿಯೇ ಮಾತು ಪ್ರಾರಂಭಿಸಿದರು.
ದೇಶದಾದ್ಯಂತ ಕೊರೊನಾ ಭೀತಿ ಇದೆ. ಆದರೆ ಗ್ರಾಮೀಣ ಭಾಗದಲ್ಲಿ ಕೊರೊನಾ ಬರೋದಿಲ್ಲ. ಅರಿಶಿಣ, ಕಾಳಿ ಮೆಣಸು, ತುಳುಸಿ, ಶುಂಠಿ ಸೇವಿಸುವುದರಿಂದ ಯಾವುದೆ ರೋಗ ಬರುವುದಿಲ್ಲ ಎಂದು ಹೇಳಿದರು.