Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟಗರು' ಚಿತ್ರತಂಡಕ್ಕೆ ವಿಮೆ ಮಾಡಿಸಿದ ನಿರ್ಮಾಪಕ
Recommended Video
'ಮಾಸ್ತಿಗುಡಿ' ಚಿತ್ರದ ದುರಂತದ ನಂತರ ಎಚ್ಚೆತ್ತುಕೊಂಡಿರುವ ಸ್ಯಾಂಡಲ್ ವುಡ್ ಈಗ ಮುಂಜಾಗೃತೆ ಕ್ರಮಗಳನ್ನ ಕೈಗೊಂಡು ಶೂಟಿಂಗ್ ಮಾಡುತ್ತಿದೆ. ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಎಲ್ಲ ಕಲಾವಿದರು, ಕಾರ್ಮಿಕರಿಗೂ ವಿಮೆ ಮಾಡಿಸುವ ಮೂಲಕ ಕನ್ನಡ ಚಿತ್ರ ನಿರ್ಮಾಪಕರು ಮೆಚ್ಚುಗೆಗಳಿಸಿಕೊಳ್ಳುತ್ತಿದ್ದಾರೆ.
ಶಿವರಾಜ್ ಕುಮಾರ್ ಅಭಿನಯದ 'ಟಗರು' ಚಿತ್ರವನ್ನ ನಿರ್ಮಾಣ ಮಾಡುತ್ತಿರುವ ಕೆ.ಪಿ.ಶ್ರೀಕಾಂತ್ ಅವರು ಈಗ 'ಟಗರು' ಚಿತ್ರತಂಡಕ್ಕೆ ವಿಮೆ ಮಾಡಿಸಿದ್ದಾರೆ. ಚಿತ್ರದಲ್ಲಿ ಹೆಚ್ಚು ರಿಸ್ಕ್ ತೆಗೆದುಕೊಂಡು ಮಾಡುವ ಸಾಹಸ ದೃಶ್ಯಗಳಿರುವುದರಿಂದ ವಿಮೆ ಅಗತ್ಯವಾಗಿ ಮಾಡಿಸಿದ್ದಾರೆ.
'ಟಗರು' ಚಿತ್ರಕ್ಕೂ ಮುಂಚೆ ಹಲವು ಚಿತ್ರತಂಡಗಳು ಕಾರ್ಮಿಕರಿಗೆ ಹಾಗೂ ಕಲಾವಿದರಿಗೆ ವಿಮೆ ಮಾಡಿಸಿದ್ದವು. ಇತ್ತೀಚೆಗಷ್ಟೇ ಯಶ್ ಅಭಿನಯದ 'ಕೆ.ಜಿ.ಎಫ್' ಚಿತ್ರದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್ ಅವರು ಕೂಡ ವಿಮೆ ಮಾಡಿಸಿದ್ದರು.
ಶಿವರಾಜ್ ಕುಮಾರ್ ಅಭಿನಯದ ಈ ಚಿತ್ರದಲ್ಲಿ ಧನಂಜಯ್, ವಸಿಷ್ಠ ಸಿಂಹ, ಮಾನ್ವಿತಾ ಹರೀಶ್, ಭಾವನಾ, ದೇವರಾಜ್ ಸೇರಿದಂತೆ ಹಲವರು ಕಾಣಿಸಿಕೊಳ್ಳುತ್ತಿದ್ದಾರೆ. ದುನಿಯಾ ಸೂರಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ.