ಅಭಿಮಾನಿಗಳಿಗಾಗಿ 'ದ್ರೋಣ'ನಾದ ಶಿವರಾಜ್ಕುಮಾರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದಲ್ಲಿ ಹೊಸ ಸಿನಿಮಾ ಸೆಟ್ಟೇರಲು ಸಜ್ಜಾಗಿದೆ. ನಿರ್ದೇಶಕ ಪ್ರಮೋದ್ ಚಕ್ರವರ್ತಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರಕ್ಕೆ ದ್ರೋಣ ಎಂದು ಹೆಸರಿಡಲಾಗಿದೆ.
ಜೂನ್ 22 ರಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು ಈ ಹಿಂದೆ 'ಹರಿಹರ' ಎನ್ನುವ ಟೈಟಲ್ ಇಡಲಾಗಿತ್ತು. ಆದರೆ ನಂತರ 'ದ್ರೋಣ' ಎಂದು ಹೆಸರಿಡಲಾಗಿದೆ. ದ್ರೋಣಾ ಔಟ್ ಅಂಡ್ ಔಟ್ ಕಮರ್ಷಿಯಲ್ ಚಿತ್ರವಾಗಿದ್ದು ಪ್ರಮೋದ್ ಚಕ್ರವರ್ತಿ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ.

ಮಹಾದೇವ್, ಸಂಗಮೇಶ್ ಬಿ ಮತ್ತು ಶೇಷ ಚಕ್ರವರ್ತಿ ದ್ರೋಣ ಸಿನಿಮಾ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇನಿಯ, ಸ್ವಾತಿ ಶರ್ಮಾ, ರಂಗಾಯಣ ರಘು, ಸಾಧು ಕೋಕಿಲಾ, ಬಾಬು ಹಿರಣಯ್ಯ, ರೇಖಾ ದಾಸ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇನ್ನು ತಂತ್ರಜ್ಞರಾಗಿ ಜಗದೀಶ್ ವಾಲಿ ಚಿತ್ರಕ್ಕೆ ಕ್ಯಾಮೆರಾ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು ರಾಮಕೃಷ್ ಸಂಗೀತ ನಿರ್ದೇಶಕರಾಗಿದ್ದಾರೆ. ಚಿತ್ರದ ಫೋಟೋ ಶೂಟ್ ಮಾಡಿಸಿದ್ದು ಸದ್ಯ ಸಿನಿಮಾದ ಫಸ್ಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Click it and Unblock the Notifications











