Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಜೊತೆ ಹೋರಾಟಕ್ಕೆ ಮುಂದಾದ ಶಿವರಾಜ್ ಕುಮಾರ್ ಹಾಗೂ ಯಶ್
ಮಹದಾಯಿ ಹೋರಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಕುಡಿಯುವ ನೀರಿಗಾಗಿ ನ್ಯಾಯ ಕೊಡಿ ಎಂದು ರೈತರು ,ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆಗೆ ಕುಳಿತಿದ್ದಾರೆ.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಉಪೇಂದ್ರ ಕೊಟ್ಟ ಸೂಪರ್ ಸುಪ್ರೀಂ ಐಡಿಯಾ!
ನಾಡು-ನುಡಿ-ಜಲ ವಿಚಾರ ಬಂದಾಗ ಹಿಂದಿನಿಂದಲೂ ಅನ್ನದಾತರ ಪರವಾಗಿ ನಿಲ್ಲುವ ಕನ್ನಡ ಸಿನಿಮಾರಂಗ ಕಳೆದ ಎರಡು ದಿನಗಳಿಂದ ರೈತರ ಜೊತೆ ಹೋರಾಟದಲ್ಲಿ ಭಾಗಿಯಾಗಿದ್ದಾರೆ.
ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ ಸೇರಿದಂತೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ನಿನ್ನೆಯ ಪ್ರತಿಭಟನೆಯಲ್ಲಿ ಪಾಳ್ಗೊಳ್ಳುವ ಮೂಲಕ ರೈತರ ಕಷ್ಟದಲ್ಲಿ ನಾವು ಕೂಡ ಭಾಗಿ ಎಂದಿದ್ದಾರೆ. ಇತ್ತ ಚಿತ್ರರಂಗದ ವತಿಯಿಂದ ಶಿವರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ವಾಣಿಜ್ಯಮಂಡಳಿಯಲ್ಲಿ ಸಭೆ ನಡೆಸಿ ರೈತರ ಹೋರಾಟದ ಬಗ್ಗೆ ಸಿನಿಮಾರಂಗ ಹೇಗೆ ಭಾಗಿ ಆಗಬೇಕು ಎಂದು ನಿರ್ಧರಿಸಲಿದ್ದಾರೆ.
ಇನ್ನು ಗೋಲ್ಡನ್ ಸ್ಟಾರ್ ಗಣೇಶ್ ರೈತರ ಹೋರಾಟಕ್ಕೆ ನಾವು ಸದಾ ಸಿದ್ದವಾಗಿದ್ದೇವೆ ಎಂದು ಟ್ವಿಟ್ ಮಾಡುವ ಮೂಲಕ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿ ಮುಂದಿನ ನಿರ್ಣಯಗಳನ್ನ ತೆಗೆದುಕೊಳ್ಳಲಿದ್ದಾರೆ.