Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೈರಾಗಿ' ಧ್ವನಿ ನೀಡಿದ ಸ್ಯಾಂಡಲ್ವುಡ್ ಅಧ್ಯಕ್ಷ: 'ಸಂಡೆ-ಮಂಡೆ' ಲವ್ವಿಗಿಲ್ಲ ಹಾಲಿಡೇ
ಒಂದ್ಕಡೆ ಸೆಂಚುರಿ ಸ್ಟಾರ್ ಶಿವಣ್ಣ. ಇನ್ನೊಂದ್ಕಡೆ ನಟ ರಾಕ್ಷಸ ಡಾಲಿ. ಮತ್ತೊಂದ್ಕಡೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್. ಈ ಮೂವರು ಕಾಂಬಿನೇಷನ್ ಸಿನಿಮಾ 'ಬೈರಾಗಿ' ಕಳೆದ ಕೆಲವು ದಿನಗಳಿಂದ ಈ ಸಿನಿಮಾ ಬೇಜಾನ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಸ್ಯಾಂಡಲ್ವುಡ್ ಅಧ್ಯಕ್ಷ ಶರಣ್.
'ಬೈರಾಗಿ' ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ. ಶಿವಣ್ಣನೊಂದಿಗೆ 'ಡಾಲಿ' ಧನಂಜಯ್ ಹಾಗೂ ಪೃಥ್ವಿ ಅಂಬರ್ ನಟಿಸಿರುವುದು ಚಿತ್ರಕ್ಕೆ ಮತ್ತೊಂದು ಕಳೆ ಬಂದಂತಾಗಿದೆ. ಈಗಾಗಲೇ ಇದೇ ಸಿನಿಮಾ ಒಂದು ಹಾಡು ರಿಲೀಸ್ ಆಗಿದ್ದು, ಈಗ ಮತ್ತೊಂದು ಹಾಡು ಬಿಡುಗಡೆಯಾಗಿದೆ.
125 ಸಿನಿಮಾದ ಬಳಿಕ ಶಿವಣ್ಣ ಸೂಪರ್ ಹೀರೊ: ಸೆಂಚುರಿಸ್ಟಾರ್ ಲುಕ್ ಹೇಗಿರುತ್ತೆ?
ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಸ್ಯಾಂಡಲ್ವುಡ್ ಅಧ್ಯಕ್ಷ ಶರಣ್ ಹಾಡಿದ್ದಾರೆ. ಇದು ಶಿವಣ್ಣನಿಗೆ ಶರಣ್ ಹಾಡುತ್ತಿರುವ ಎರಡನೇ ಹಾಡು. 'ವಜ್ರಕಾಯ' ಸಿನಿಮಾದ ಬಳಿಕ ಶಿವಣ್ಣನಿಗೆ ಶರಣ್ ದನಿ ನೀಡಿರುವುದು ಮತ್ತೊಂದು ವಿಶೇಷ. ಅಂದ್ಹಾಗೆ 'ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ...' ಎಂಬ ಸಾಹಿತ್ಯ ರಚಿಸಿರುವುದು ಪ್ರಮೋದ್ ಮರವಂತೆ.
ಶಿವಣ್ಣ, ಡಾಲಿ ಧನಂಜಯ್ ಹಾಗೂ ಪೃಥ್ವಿ ಅಂಬರ್ ಅಭಿನಯದ ಈ ಹಾಡನ್ನು ಸಿಂಗಲ್ ಶಾಟ್'ನಲ್ಲಿ ಶೂಟ್ ಮಾಡಿರುವುದು ಮತ್ತೊಂದು ವಿಶೇಷ. ಈ ಕಾರಣಕ್ಕೆ ಈ ಹಾಡು ಕೌತುಕವನ್ನು ಹೆಚ್ಚಿಸಿದೆ. ಶಿವಣ್ಣನ ಅಭಿಮಾನಿಗಳೂ ಕೂಡ ಈ ಹಾಡು ಕೇಳಿ ಫುಲ್ ಥ್ರಿಲ್ ಆಗಿದ್ದಾರೆ.
'ರಿದಮ್ ಆಫ್ ಶಿವಪ್ಪ' ಕಾನ್ಸೆಪ್ಟ್'ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ 'ಬೈರಾಗಿ' ತಂಡವೇ ಹೆಜ್ಜೆ ಹಾಕಿದೆ. ಈ ಸ್ಪೆಷಲ್ ಸಾಂಗ್ ಅನ್ನು ದೇವನಹಳ್ಳಿ ಬಳಿಯಿರುವ ನೂತನ ಮಾಲ್ನಲ್ಲಿ ಶೂಟಿಂಗ್ ಮಾಡಲಾಗಿದೆ. ನೃತ್ಯ ನಿರ್ದೇಶಕ ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಹಾಡಿಗೆ ತಮಿಳಿನ ಗಾಯಕ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು.
Exclusive: ಶಿವಣ್ಣನಿಗೆ ಕಥೆ ಒಪ್ಪಿಸಿದ ರಜನಿ ಸಿನಿಮಾದ ನಿರ್ದೇಶಕ: ಶಿವಣ್ಣನ ಪಾತ್ರದ ಹೈಲೈಟ್ ಏನು?
'ಬೈರಾಗಿ' ಸಿನಿಮಾವನ್ನು ವಿಜಯ್ ಮಿಲ್ಟನ್ ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟ ಶಶಿಕುಮಾರ್, ಅನು ಪ್ರಭಾಕರ್, ಅಂಜಲಿ, ಯಶ ಶಿವಕುಮಾರ್, ಚಿಕ್ಕಣ್ಣ ಸೇರಿದಂತೆ ದೊಡ್ಡ ತಾರಾದಂಡೇ ಇದೆ. ಕೃಷ್ಣ ಸಾರ್ಥಕ್ 'ಬೈರಾಗಿ' ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.