Don't Miss!
- Sports CSK vs LSG IPL 2024: ಚೆನ್ನೈನ ಚೆಪಾಕ್ ಕೋಟೆಯನ್ನು ಭೇದಿಸುವುದೇ ಲಕ್ನೋ?; ಸಂಭಾವ್ಯ ಆಡುವ 11ರ ಬಳಗ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ನೀರಿಗಾಗಿ ಬೀದಿಗಿಳಿದ ಶಿವಣ್ಣ ಅಭಿಮಾನಿಗಳು
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಕಾವೇರಿ ನ್ಯಾಯಾಧಿಕರಣದ ತೀರ್ಪನ್ನು ಖಂಡಿಸಿ ಅಕ್ಟೋಬರ್ 5ರಂದು ಬೆಳಗ್ಗೆ 11.30ಕ್ಕೆ "ಕಾವೇರಿ ನಮ್ಮದು" ಬೃಹತ್ ಪ್ರತಿಭಟನೆಯನ್ನು ಶಿವಣ್ಣ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ಸ್ಥಳ ಮೈಸೂರು ಬ್ಯಾಂಕ್ ವೃತ್ತ.
ಅಕ್ಟೋಬರ್ 6ರ ಕರ್ನಾಟಕ ಬಂದ್ ಗೂ ಶಿವರಾಜ್ ಕುಮಾರ್ ಅವರ ಅಭಿಮಾನಿ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಸೇನಾ ಸಮಿತಿ, ಗಂಡುಗಲಿ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ, ಶ್ರೀರಾಮ್ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.
ಶಿವು ಅಡ್ಡ, ಶಿವ ಸೈನ್ಯ, ಡಾನ್ ಶಿವರಾಜ್ ಕುಮಾರ್ ಸೇನಾ ಸಮಿತಿ, ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಸಮಾಜ ಸೇವಾ ಸಂಘ, ಕೆಚ್ಚೆದೆಯ ಸಿಂಹ ಶಿವರಾಜ್ ಕುಮಾರ್ ಸೇನಾ ಸಮಿತಿ ನಡೆಸಲಿರುವ ಬೃಹತ್ ಪ್ರತಿಭಟನೆ ನಡೆಸಲಿವೆ.
ಮೈಸೂರು ವೃತ್ತದಿಂದ ಆರಂಭವಾಗುವ ಪ್ರತಿಭಟನಾ ರ್ಯಾಲಿ ರಾಜಭವನದವರೆಗೆ ಸಾಗಲಿದೆ. ಈ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ ಶಿವರಾಜ್ ಕುಮಾರ್ ಅಭಿಮಾನಿಗಳು ಫೇಸ್ ಬುಕ್ ನಲ್ಲೂ ಅಭಿಯಾನ ಆರಂಭಿಸಿದ್ದಾರೆ. ಇದೆಲ್ಲ ಸರಿ, ಶಿವಣ್ಣ ಪ್ರತಿಭಟನೆಗೆ ಬರ್ತಾರಾ? (ಒನ್ಇಂಡಿಯಾ ಕನ್ನಡ)