Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಸ್ಮಾರಕ ವಿಚಾರಕ್ಕೆ ನಾವೇ ಮುಂದೆ ನಿಲ್ಲುತ್ತೇವೆ ಎಂದ ಶಿವಣ್ಣ
Recommended Video
ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರ ಚೊಚ್ಚಲ ಸಿನಿಮಾ 'ನಾಗರಹಾವು' ಹೊಸ ತಂತ್ರಜ್ಞಾನದಲ್ಲಿ ಬಿಡುಗಡೆಯಾಗಿರುವುದು ಸ್ಯಾಂಡಲ್ ವುಡ್ ನಲ್ಲಿ ಹಬ್ಬದ ವಾತಾವರಣ ಉಂಟು ಮಾಡಿದೆ.
ಅಭಿಮಾನಿಗಳೆಲ್ಲರೂ ಚಿತ್ರವನ್ನ ನೋಡಿ ಖುಷಿ ಪಡುತ್ತಿದ್ದಾರೆ. ಅಭಿಮಾನಿಗಳ ಜೊತೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡ 'ನಾಗರಹಾವು' ಸಿನಿಮಾವನ್ನ ಇಷ್ಟಪಟ್ಟು ನೋಡುತ್ತಿದ್ದಾರೆ.
ಹೀಗೆ, 'ನಾಗರಹಾವು' ಸಂಭ್ರಮದಲ್ಲಿ ತೇಲಾಡುತ್ತಿರುವ ವಿಷ್ಣು ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ನೀಡಿದ್ದಾರೆ. ನರ್ತಕಿ ಚಿತ್ರಮಂದಿರದಲ್ಲಿ 'ನಾಗರಹಾವು' ನೋಡಿದ ಶಿವಣ್ಣ, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್, ಈಶ್ವರಿ ಪ್ರೊಡಕ್ಷನ್ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಇದರ ಮಧ್ಯೆ ಡಾ ವಿಷ್ಣು ಸ್ಮಾರಕದ ಬಗ್ಗೆಯೂ ಸೆಂಚುರಿಸ್ಟಾರ್ ಮಾತನಾಡಿದರು. ''ವಿಷ್ಣು ಸರ್ ಸ್ಮಾರಕ ಖಂಡಿತಾ ಆಗ್ಬೇಕು, ಅದು ಆಗುತ್ತೆ. ಅದಕ್ಕೆ ಒಂದು ಸರಿಯಾದ ಮಾರ್ಗದಲ್ಲಿ ಹೋಗಬೇಕಿದೆ. ನನಗೆ ಅಪ್ಪಾಜಿಗೆ ಎಷ್ಟು ಗೌರವ ಕೊಡ್ತಿನೋ ವಿಷ್ಣು ಸರ್ ಗೂ ಅಷ್ಟೇ ಗೌರವ ಕೊಡ್ತೀನಿ. ನಾನು ವಿಷ್ಣು ಸರ್ ಅವರ ಜೊತೆಯಲ್ಲಿ ಅವರ ಕೈಹಿಡಿದುಕೊಂಡು ಹಲವು ಕಾರ್ಯಕ್ರಮಕ್ಕೆ ಹೋಗಿದ್ದೀನಿ. ಅವರ ಸ್ಮಾರಕ ನಿರ್ಮಾಣ ಮಾಡಬೇಕು, ಖಂಡಿತಾ ನಾವೇ ಬಂದು ಮುಂದೆ ನಿಲ್ಲುತ್ತೇವೆ, ಅದರ ಬಗ್ಗೆ ಯೋಚನೆ ಮಾಡಬೇಕಾಗಿಲ್ಲ'' ಎಂದರು.
ಡಾ.ವಿಷ್ಣು ಸ್ಮಾರಕ ವಿವಾದ ಬಗೆಹರಿಸಲು ಸುದೀಪ್ ನೀಡಿದ 4 ಸಲಹೆಗಳು
ಇನ್ನು ಎಚ್ ಡಿ ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಆದ ಬಳಿಕ ಶ್ರೀಮತಿ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಅವರನ್ನ ಈ ವಿಚಾರವಾಗಿ ಭೇಟಿ ನೀಡಿ ಮನವಿ ಮಾಡಿದ್ದರು. ನಂತರ ಎಚ್ಡಿಕೆ ಕೂಡ ಭಾರತಿ ಅವರೊಂದಿಗೆ ಹಾಗೂ ಅವರ ಅಭಿಮಾನಿಗಳೊಂದಿಗೆ ಚರ್ಚೆ ಮಾಡಿ, ಆದಷ್ಟೂ ಬೇಗ ಸ್ಮಾರಕ ನಿರ್ಮಾಣ ಮಾಡ್ತೀವಿ ಎಂದಿದ್ದರು.
ಸಿಎಂ ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್
ಸೆಪ್ಟಂಬರ್ 18 ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬವಿದೆ. ಆ ಸಂತೋಷದ ದಿನಕ್ಕೆ ಸರ್ಕಾರ ಹಾಗೂ ವಿಷ್ಣು ಕುಟುಂಬದಿಂದ ಸಿಹಿ ಸುದ್ದಿ ಸಿಗುತ್ತೆ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯ್ತಿದ್ದಾರೆ.