Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂತನಾಗಿ 'ಸಂತೆಯಲ್ಲಿ ನಿಂತ ಕಬೀರ' ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಸಂತೆಯಲ್ಲಿ ನಿಂತ ಕಬೀರ' ಚಿತ್ರಕ್ಕೆ ಇದೇ ಯುಗಾದಿ ಅಂದು ಅದ್ಧೂರಿ ಮುಹೂರ್ತ ಸಮಾರಂಭ. ಹೊಸ ವರ್ಷದ ಪ್ರಯುಕ್ತ ಹೊಸ ಪ್ರಯೋಗದೊಂದಿಗೆ, ಹೊಸ ಲುಕ್ ನಲ್ಲಿ ಶಿವಣ್ಣ ಕಬೀರನಾಗಿದ್ದಾರೆ.
ದಶಕಗಳ ಹಿಂದೆ ನಟಸಾರ್ವಭೌಮ ಡಾ.ರಾಜ್ ಕುಮಾರ್ ಮಹಾತ್ಮ ಕಬೀರನಾಗಿ ದೋಹಾಗಳನ್ನ ಹೇಳಿದ್ರು. ಈಗ ಇದೇ ಹಾದಿಯಲ್ಲಿ ಅಣ್ಣಾವ್ರ ಮಗ ಕೂಡ ಸಾಗುತ್ತಿರುವುದು ವಿಶೇಷ. [ಯುಗಾದಿ ಹಬ್ಬದಂದು ಶಿವಣ್ಣ ಸಂತ 'ಕಬೀರ' ಶುರು]
ಚಿತ್ರದ ಶೀರ್ಷಿಕೆ ಸೂಚಿಸುವ ಹಾಗೆ, ಇದು 'ಸಂತ ಕಬೀರ್ ದಾಸ್'ನ ಜೀವನ ಚರಿತ್ರೆ. ಭೀಷ್ಮ ಸಹಾನಿ ಅವರ 'ಕಬೀರ ಕಡಾ ಭಾಝಾರ್' ಕೃತಿಯನ್ನಾಧರಿಸಿ 'ಸಂತೆಯಲ್ಲಿ ನಿಂತ ಕಬೀರ' ಚಿತ್ರಕಥೆ ರಚಿಸಲಾಗಿದೆ.
ಕಬೀರ್ ದಾಸ್ ಆಗಿ ಶಿವಣ್ಣ ಕಾಣಿಸಿಕೊಳ್ಳುತ್ತಿದ್ದರೆ, ಅವರ ತಂದೆ ಪಾತ್ರದಲ್ಲಿ ಓಂ ಪುರಿ ಮತ್ತು ತಾಯಿಯಾಗಿ ಅಕ್ಷತಾ ರಾವ್ ಅಭಿನಯಿಸಲಿದ್ದಾರೆ. ಶಿವಣ್ಣನಿಗೆ ಜೋಡಿಯಾಗಿ ಮಲೆಯಾಳಂ ನಟಿ ಸನುಷ ಇದ್ದಾರೆ. ಕಾಲಿವುಡ್ ನಟ ಶರತ್ ಕುಮಾರ್, ಅವಿನಾಷ್, ಶರತ್ ಲೋಹಿತಾಶ್ವ, ದತ್ತಣ್ಣ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ['ಗೀತಾ' ಖ್ಯಾತಿಯ ಅಕ್ಷತಾ ರಾವ್ ಸೆಕೆಂಡ್ ಇನ್ನಿಂಗ್ಸ್]
ಕಬೀರ್ ದಾಸ್ ಯಶೋಗಾಥೆಯನ್ನ ಕಲಾತ್ಮಕವಾಗಿ ಕಟ್ಟಿಕೊಡುವುದಕ್ಕೆ ರೆಡಿಯಾಗಿರುವುದು ಇಂದ್ರಬಾಬು ಅಂತ ಇದೀಗ ಹೆಸರು ಬದಲಾಯಿಸಿಕೊಂಡಿರುವ 'ಕಬ್ಬಡಿ' ಖ್ಯಾತಿಯ ನರೇಂದ್ರ ಬಾಬು. [ಹ್ಯಾಟ್ರಿಕ್ ಹೀರೋ 'ಕಬೀರ' ಫಸ್ಟ್ ಲುಕ್ ಔಟ್]
ಕುಮಾರಸ್ವಾಮಿ ಪೆತ್ತಿಕೊಂಡ 'ಸಂತೆಯಲ್ಲಿ ನಿಂತ ಕಬೀರ' ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಮುಹೂರ್ತ ನೆರವೇರಲಿದ್ದು, ಫಸ್ಟ್ ಶಾಟ್ ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕ್ಲಾಪ್ ಮಾಡಲಿದ್ದಾರೆ. (ಫಿಲ್ಮಿಬೀಟ್ ಕನ್ನಡ)