Don't Miss!
- News Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಂಗಾರದ ಮನುಷ್ಯ' ಪ್ರಚಾರಕ್ಕಾಗಿ ವಿವಿಧ ನಗರಗಳಿಗೆ ಶಿವಣ್ಣ ಭೇಟಿ
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ 'ಬಂಗಾರ s/o ಬಂಗಾರದ ಮನುಷ್ಯ' ಚಿತ್ರ 30 ದಿನಗಳನ್ನು ಪೂರೈಸಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಶಿವಣ್ಣ ನಾಳೆ ಚಿತ್ರದ ಪ್ರಮೋಷನ್ ಗೆ ವಿವಿಧ ನಗರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದಿದೆ.[ವಿಮರ್ಶೆ: 'ಬಂಗಾರದ ಮನುಷ್ಯ'ನ ಪ್ರತಿರೂಪ ಶಿವಣ್ಣನ ಈ 'ಬಂಗಾರ' ರೂಪ]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ(ಜೂನ್ 20) ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಚಿತ್ರದ ಪ್ರಮೋಷನ್ ಹಿನ್ನೆಲೆಯಲ್ಲಿ ಭೇಟಿ ನೀಡಲು ನಿರ್ಧಿರಿಸಿದ್ದಾರಂತೆ.
ಮೈಸೂರಿನ ಲಕ್ಷ್ಮೀ ಥಿಯೇಟರ್ ಗೆ ನಾಳೆ ಮಧ್ಯಾಹ್ನ 1.30 ಕ್ಕೆ ಶಿವಣ್ಣ ಆಗಮಿಸಲಿದ್ದು, ನಂತರ ಮಂಡ್ಯದ ಸಂಜಯ್ ಚಿತ್ರಮಂದಿರ ಮತ್ತು ರಾಮನಗರದ ಶಾನ್ ಚಿತ್ರಮಂದಿರಕ್ಕೆ ಫಸ್ಟ್ ಶೋ ಮತ್ತು ಸೆಕೆಂಡ್ ಶೋ ವೇಳೆಗೆ ಚಿತ್ರ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಶಿವಣ್ಣ ಅಭಿಮಾನಿಗಳು ಈ ಸಮಯಕ್ಕೆ ಥಿಯೇಟರ್ ಬಳಿ ಇದ್ದರೇ ಅವರನ್ನು ನೋಡುವ ಅವಕಾಶ ದೊರೆಯಲಿದೆ.
'ಬಂಗಾರ s/o ಬಂಗಾರದ ಮನುಷ್ಯ' ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೊತೆಯಾಗಿ ವಿದ್ಯಾ ಪ್ರದೀಪ್ ಅಭಿನಯಿಸಿದ್ದಾರೆ. ಉಳಿದಂತೆ ಸಾಧು ಕೋಕಿಲ, ಚಿಕ್ಕಣ್ಣ, ಶಿವರಾಮ್, ಶ್ರೀನಾಥ್, ಶ್ರೀನಿವಾಸ ಮೂರ್ತಿ, ಶರತ್ ಲೋಹಿತಾಶ್ವ ಮತ್ತು ಇತರರು ಇದ್ದಾರೆ.
ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಯೋಗಿ ಜಿ ರಾಜ್ ನಿರ್ದೇಶನ ಮಾಡಿದ್ದು, ಜಯಣ್ಣ ಮತ್ತು ಬೋಗೇಂದ್ರ ರವರು ನಿರ್ಮಾಣ ಮಾಡಿದ್ದಾರೆ.