Don't Miss!
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ನಟ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಕನ್ನಡ ಚಿತ್ರರಂಗದ ನಾಯಕತ್ವ ವಹಿಸಿಕೊಂಡಿದ್ದಾರೆ. ಸಂಕಷ್ಟದಲ್ಲಿರುವ ಚಿತ್ರರಂಗ, ಕಾರ್ಮಿಕರು, ಪ್ರದರ್ಶಕರ ಅನುಕೂಲಕ್ಕಾಗಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಚಿತ್ರರಂಗದ ವಿವಿಧ ವಿಭಾಗಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ. ಚಿತ್ರರಂಗದ ಅಹವಾಲುಗಳನ್ನು ಸರ್ಕಾರ ಮುಂದಿಡಲು ಯೋಜನೆ ರೂಪಿಸುತ್ತಿದ್ದಾರೆ. ಅಂಬರೀಷ್ ಅವರ ಅಗಲಿಕೆ ಬಳಿಕ ಚಿತ್ರರಂಗ ಎದುರಿಸುತ್ತಿದ್ದ ನಾಯಕತ್ವದ ಕೊರತೆಯನ್ನು ಶಿವರಾಜ್ ಕುಮಾರ್ ತುಂಬಿರುವುದು ಎಲ್ಲರಿಗೂ ಸಂತಸ ನೀಡಿದೆ.
Recommended Video
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಬಳಿಕ ಕನ್ನಡ ಚಿತ್ರರಂಗ ಬಹುತೇಕ ಸ್ತಬ್ಧಗೊಂಡಿತ್ತು. ಚಿತ್ರೀಕರಣಗಳು ಸ್ಥಗಿತಗೊಂಡಿದ್ದವು. ಚಿತ್ರೀಕರಣ ನಡೆಸಲು ಸರ್ಕಾರ ಅನುಮತಿ ನೀಡಿದ ಬಳಿಕ ಸುದೀಪ್ ಸೇರಿದಂತೆ ಅನೇಕರು ಪುನಃ ಶೂಟಿಂಗ್ ಆರಂಭಿಸಿದ್ದಾರೆ. ಈ ನಡುವೆ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಸಂತಸ ಸುದ್ದಿ ಸಿಕ್ಕಿದೆ. ಅವರ ಬಹುನಿರೀಕ್ಷಿತ ಚಿತ್ರ 'ಭಜರಂಗಿ 2' ಚಿತ್ರೀಕರಣ ಮತ್ತೆ ಶುರುವಾಗಲಿದೆ. ಮುಂದೆ ಓದಿ.
ನಾವೆಲ್ಲರೂ ಜತೆಯಾಗಿದ್ದೇವೆ, ಶೀಘ್ರವೇ ಚಿತ್ರೀಕರಣ ಆರಂಭಿಸುತ್ತೇವೆ: ಶಿವರಾಜ್ ಕುಮಾರ್ ಭರವಸೆ
ಆಗಸ್ಟ್ 10ರ ಬಳಿಕ ಚಿತ್ರೀಕರಣ
ಎ. ಹರ್ಷ ನಿರ್ದೇಶನದ 'ಭಜರಂಗಿ 2' ಚಿತ್ರೀಕರಣ ಆಗಸ್ಟ್ 10ರ ಬಳಿಕ ಮತ್ತೆ ಆರಂಭವಾಗಲಿದೆ. ಮೋಹನ್ ಬಿ ಕೆರೆ ಅವರ ಸ್ಟುಡಿಯೋದಲ್ಲಿ ಬೃಹತ್ ಸೆಟ್ ಹಾಕಿಸಲಾಗಿದ್ದು, ಅಲ್ಲಿ ಚಿತ್ರೀಕರಣ ಶುರುವಾಗಲಿದೆ. 'ಭಜರಂಗಿ 2' ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಅದು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ.
12 ದಿನಗಳ ಚಿತ್ರೀಕರಣ ಬಾಕಿ
ಭಜರಂಗಿ 2 ಚಿತ್ರದ ಚಿತ್ರೀಕರಣ ಅಂತಿಮ ಘಟ್ಟದಲ್ಲಿದೆ. ಇನ್ನು ಸುಮಾರು 12 ದಿನಗಳ ಚಿತ್ರೀಕರಣ ಬಾಕಿ ಇದೆ. ಅದರಲ್ಲಿ ನಾಲ್ಕು ದಿನಗಳ ಚಿತ್ರೀಕರಣ ಈ ಸ್ಟುಡಿಯೋದಲ್ಲಿ ನಡೆಯಲಿದೆ. ಶಿವರಾಜ್ ಕುಮಾರ್ ಅವರ ಪಾತ್ರಕ್ಕೆ ಆರು ದಿನಗಳ ಚಿತ್ರೀಕರಣದ ಅಗತ್ಯವಿದೆ.
ಸಾವಿರ ಜನರನ್ನು ಹಿಂದೆ ಇಟ್ಟುಕೊಂಡವನು ಲೀಡರ್ ಅಲ್ಲ: ಶಿವರಾಜ್ ಕುಮಾರ್
ಚಿತ್ರೀಕರಣ ಅನಿವಾರ್ಯ
ಚಿತ್ರರಂಗದ ಕಾರ್ಮಿಕರ ಒಳಿತಿಗಾಗಿ ಈ ಸಂಕಷ್ಟದ ಸಮಯದಲ್ಲಿಯೂ ಚಿತ್ರೀಕರಣ ನಡೆಸುವುದು ಅನಿವಾರ್ಯವಾಗಿದೆ ಎಂದು ಶಿವರಾಜ್ ಕುಮಾರ್ ಇತ್ತೀಚೆಗೆ ಹೇಳಿದ್ದರು. ಚಿತ್ರೀಕರಣ ನಡೆಸದೆ ತಾವು ಮನೆಯೊಳಗೆ ಕುಳಿತರೆ ಸಿನಿಮಾಗಳನ್ನು ಅವಲಂಬಿಸಿರುವ ಇತರರಿಗೆ ತೊಂದರೆಯಾಗುತ್ತದೆ ಎಂದು ಶಿವಣ್ಣ ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ.
ಶಿವಣ್ಣ-ಹರ್ಷ ನಾಲ್ಕನೆಯ ಚಿತ್ರ
ವಜ್ರಕಾಯ ಮತ್ತು ಭಜರಂಗಿ ಚಿತ್ರದ ಬಳಿಕ ಇದು ಎ. ಹರ್ಷ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ನ ಮೂರನೇ ಚಿತ್ರ. ಈ ನಡುವೆ ಇವರಿಬ್ಬರ ಜೋಡಿಯ ಮತ್ತೊಂದು ಸಿನಿಮಾ ಕೂಡ ಸೆಟ್ಟೇರುವ ಸುಳಿವು ದೊರಕಿದೆ. 'ಹದೆರಬೇಡ... ಕ್ಷಮಿಸಬೇಡ...' ಎಂಬ ಸಾಲುಗಳುಳ್ಳ ಶಿವರಾಜ್ ಕುಮಾರ್ ಪೋಸ್ಟರ್ ಅನ್ನು ಜುಲೈ 12ರಂದು ಅವರ ಜನ್ಮದಿನದಂದು ಬಿಡುಗಡೆ ಮಾಡಲಾಗಿತ್ತು. ಭಜರಂಗಿ 2 ಬಳಿಕ ಹರ್ಷ ಈ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ.