Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಮೌಳಿ' ಅಪ್ಪ ವಿಜಯೇಂದ್ರ ಪ್ರಸಾದ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ!
ರಾಜಮೌಳಿ.. . ತೆಲುಗಿನ ಸ್ಟಾರ್ ಡೈರೆಕ್ಟರ್... ತಮ್ಮ ಚಿತ್ರಗಳ ಮೂಲಕ ಇಡೀ ಭಾರತದ ಚಿತ್ರರಂಗವನ್ನ ತನ್ನತ್ತ ಸೆಳೆದಿರುವ ನಿರ್ದೇಶಕ. ಇವರ ತಂದೆಯೇ ವಿಜಯೇಂದ್ರ ಪ್ರಸಾದ್. ಚಿತ್ರಗಳಿಗೆ ಕಥೆ ಬರೆಯುವುದರಲ್ಲಿ ಸೂಪರ್ ಸ್ಟಾರ್. ರಾಜಮೌಳಿ ನಿರ್ದೇಶನದ ಬಹುತೇಕ ಎಲ್ಲ ಚಿತ್ರಗಳಿಗೂ ವಿಜಯೇಂದ್ರ ಪ್ರಸಾದ್ ಅವರೇ ಕಥೆ ಬರೆಯುತ್ತಾರೆ.
ಈ ದಿಗ್ಗಜ ಕಥೆಗಾರ ಕನ್ನಡದಲ್ಲೊಂದು ಸಿನಿಮಾ ನಿರ್ದೇಶನ ಮಾಡುತ್ತಿರುವುದು ಬಹುಶಃ ಗೊತ್ತಿರುತ್ತೆ. ಕಳೆದ ವರ್ಷ ಈ ಸಿನಿಮಾ ಸೆಟ್ಟೇರಿತ್ತು. ಈಗ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕೂಡ ಒಂದು ಭಾಗವಾಗುತ್ತಿದ್ದಾರೆ.
ವಿಜಯೇಂದ್ರ ಪ್ರಸಾದ್ ಚಿತ್ರದಲ್ಲಿ ಶಿವಣ್ಣ!
ರಾಜಮೌಳಿ ಅವರ ಅಪ್ಪ ಕನ್ನಡದಲ್ಲಿ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಲಿದ್ದಾರೆ.
'ಶ್ರೀವಲ್ಲಿ' ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಸಾಥ್!
ಚಿತ್ರದ ಮುಖ್ಯವಾದ ಎರಡು ದೃಶ್ಯಗಳಿಗೆ ಸೆಂಚುರಿ ಸ್ಟಾರ್ ಹಿನ್ನೆಲೆ ಧ್ವನಿ ನೀಡುತ್ತಿದ್ದಾರೆ. ಈ ಕುರಿತು ವಿಜಯೇಂದ್ರ ಪ್ರಸಾದ್ ಅವರು, ಶಿವಣ್ಣ ಅವರನ್ನ ಭೇಟಿ ಮಾಡಿದ್ದು, ಶಿವಣ್ಣ ಕೂಡ ಒಪ್ಪಿಕೊಂಡಿದ್ದಾರೆ.
ಹೊಸಬರ 'ಶ್ರೀವಲ್ಲಿ'!
ವಿಜಯೇಂದ್ರ ಪ್ರಸಾದ್ ಕನ್ನಡದಲ್ಲಿ ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರಕ್ಕೆ 'ಶ್ರೀವಲ್ಲಿ' ಎಂಬ ಟೈಟಲ್ ಇಟ್ಟಿದ್ದು, ಈ ಚಿತ್ರದಲ್ಲಿ ರಂಜಿತ್ ಮತ್ತು ಮಾಜಿ ಮಿಸ್ ಇಂಡಿಯಾ ಸ್ನೇಹಾ ಸಿಂಗ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಬಿಡುಗಡೆ ಯಾವಾಗ?
ವಿಜೇಂದ್ರ ಪ್ರಸಾದ್ ಈ ಚಿತ್ರಕ್ಕೆ, ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರೇ, ಬಿ.ವಿ.ಎಸ್.ಎನ್ ರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಸದ್ಯ, ಶ್ರೀವಲ್ಲಿ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಜನವರಿ ತಿಂಗಳಲ್ಲಿ ಟೀಸರ್ ಮತ್ತು ಆಡಿಯೋ ಬಿಡುಗಡೆ ಮಾಡಲಿದ್ದಾರೆ. ಎಲ್ಲ ಅಂದುಕೊಂಡಂತೆ ಆದ್ರೆ, ಇದೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಲ್ಲಿದೆ ಚಿತ್ರತಂಡ.