Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀವು ನನ್ನ ಸ್ವಂತ ಅಣ್ಣನಂತೆ: ಹಿರಿಯ ನಟನಿಗೆ ಶಿವಣ್ಣ ಹುಟ್ಟುಹಬ್ಬ ಶುಭಾಶಯ
ಕನ್ನಡ ಚಿತ್ರರಂಗದ ದೊಡ್ಮನೆ ಎಂದರೆ ಪರಭಾಷೆ ಸಿನಿಮಾ ನಟರಿಗೂ ಗೌರವ ಮತ್ತು ರಾಜ್ಕುಮಾರ್ ಕುಟುಂಬದೊಂದಿಗೆ ಬಹುಕಾಲದ ನಂಟು.
Recommended Video
ರಾಜ್ಕುಮಾರ್ ಇದ್ದಾಗ ಆರಂಭವಾದ ಈ ಪರಭಾಷಾ ನಟರು ಹಾಗೂ ಅವರ ಕುಟುಂಬದೊಂದಿಗಿನ ಬಾಂಧವ್ಯವನ್ನು ಅವರ ಮಕ್ಕಳಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಅವರು ಈಗಲೂ ಮುಂದುವರೆಸಿಕೊಂಡು ಬರುತ್ತಿದ್ದಾರೆ.
ಪುನೀತ್ ಜೊತೆ ಸಿನಿಮಾ ಯಾವಾಗ? ಶಿವರಾಜ್ ಕುಮಾರ್ ಕೊಟ್ಟರು ಉತ್ತರ
ಇದಕ್ಕೆ ತಾಜಾ ಉದಾಹರಣೆ, ಮೊನ್ನೆಯಷ್ಟೆ ಜೂ.ಎನ್ಟಿಆರ್ ಹುಟ್ಟುಹಬ್ಬಕ್ಕೆ ಪುನೀತ್ ರಾಜ್ಕುಮಾರ್ ಅವರು ಶುಭಾಶಯ ಕೋರಿದ್ದು, ಈಗ ಶಿವರಾಜ್ ಕುಮಾರ್ ಅವರು ತೆಲುಗಿನ ಹಿರಿಯ ನಟ ಬಾಲಕೃಷ್ಣ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ವಿಡಿಯೋ ಮೂಲಕ ಶುಭಾಶಯ
ಬಾಲಕೃಷ್ಣ ಹುಟ್ಟುಹಬ್ಬಕ್ಕೆ ವಿಡಿಯೋ ಮೂಲಕ ಶುಭಾಶಯ ಕೋರಿರುವ ಶಿವರಾಜ್ ಕುಮಾರ್, ಬಾಲಕೃಷ್ಣ ಅವರನ್ನು ಅಣ್ಣನೆಂದು ಕರೆದು ಇಬ್ಬರ ಬಾಂಧವ್ಯದ ಝಲಕ್ ಅನ್ನು ಅಭಿಮಾನಿಗಳಿಗೆ ತೋರಿಸಿಕೊಟ್ಟಿದ್ದಾರೆ.
ನೀವು ನನ್ನ ಪಾಲಿಗೆ ಅಣ್ಣ: ಶಿವಣ್ಣ
'ಬ್ರದರ್ ಬಾಲಕೃಷ್ಣ ಅವರಿಗೆ 60 ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳು. ನೀವು ನನ್ನನ್ನು ಬ್ರದರ್ ಎಂದು ಕರೆಯುತ್ತೀರಿ, ನನಗೆ ಆಗ ಸ್ವಂತ ಅಣ್ಣನೇ ನನ್ನನ್ನು ತಮ್ಮನೆಂದು ಕರೆದಂತೆ ಭಾಸವಾಗುತ್ತದೆ. ಇದು ಬಾಯಿ ಮಾತಿಗೆ ಹೇಳುತ್ತಿಲ್ಲ' ಎಂದು ಶಿವರಾಜ್ ಕುಮಾರ್ ವಿಡಿಯೋದಲ್ಲಿ ಹೇಳಿದ್ದಾರೆ.
ಓಂ ಸಿನಿಮಾಕ್ಕೆ 25 ವರ್ಷ: ಸಂಭ್ರಮಕ್ಕೆ ಅಡ್ಡಿಯಾದ ಟೆಕ್ನಿಕಲ್ ಪ್ರಾಬ್ಲಮ್!
ಮತ್ತೆ ನಿಮ್ಮೊಂದಿಗೆ ನಟಿಸುತ್ತೇನೆ: ಶಿವರಾಜ್ಕುಮಾರ್
'ನಾನು ನಿಮ್ಮ ನೂರನೇ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ನಿಮ್ಮ ಇನ್ನೂರನೇ ಸಿನಿಮಾದಲ್ಲಿಯೂ ಅತಿಥಿ ಪಾತ್ರದಲ್ಲಿ ನಟಿಸುತ್ತೇನೆ. ಅಷ್ಟು ಮಾತ್ರವಲ್ಲ ನಿಮ್ಮ ಜೊತೆ ಮುಖ್ಯಪಾತ್ರಧಾರಿಯಾಗಿಯೂ ನಟಿಸಬಹುದು' ಎಂದಿದ್ದಾರೆ ಶಿವರಾಜ್ ಕುಮಾರ್.
ಹೆಚ್ಚಿನ ಕೀರ್ತಿ ನೀಡಲಿ: ಶಿವರಾಜ್ ಕುಮಾರ್
'ಆ ದೇವರು ಬಾಲಕೃಷ್ಣ ಅವರಿಗೆ ಹೆಚ್ಚಿನ ಆರೋಗ್ಯ, ಆಯುಷ್ಯ ಮತ್ತು ಇನ್ನೂ ಹೆಚ್ಚಿನ ಕೀರ್ತಿ ನೀಡಲಿ' ಎಂದು ಶಿವರಾಜ್ ಕುಮಾರ್ ಅವರು ಹಾರೈಸಿದ್ದಾರೆ.
ರೌಡಿಗಳೇ ತುಂಬಿದ್ದ 'ಓಂ' ಸಿನಿಮಾ ಸೆಟ್ನಲ್ಲಿ ಗಲಾಟೆ ಆಗದಂತೆ ತಡೆದಿದ್ದು ಆ ಒಂದು ಹೆಸರು