Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ರನ್ನು 'ಕಿಂಗ್ ಆಫ್ ಸ್ಯಾಂಡಲ್ ವುಡ್' ಎಂದ ಶೋಭಾ ಕರಂದ್ಲಾಜೆ
Recommended Video
ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಇಂದು ಉಡುಪಿ ಹಾಗೂ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಹ ಆಗಿರುವ ಅವರು ಪುನೀತ್ ಜೊತೆಗೆ ಮೋದಿ ಸರ್ಕಾರದ ಸಾಧನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.
Sampark For Samarthan ಅಭಿಯಾನದ ವಿಚಾರವಾಗಿ ಶೋಭಾ ಕರಂದ್ಲಾಜೆ ಅವರು ಪುನೀತ್ ರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರ ಏನೇನು ಕೆಲಸ ಮಾಡಿದೆ ಎಂಬ ಸಾಧನೆಯ ಪುಸ್ತಕವನ್ನು ಅವರಿಗೆ ನೀಡಿದ್ದಾರೆ.
ಕೊಡಗಿಗೆ ನೆರವಾಗಿ ಎಂದು ಮನವಿ ಮಾಡಿದ ಶಿವರಾಜ್ ಕುಮಾರ್
ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು ''ಅಪ್ಪನಂತೆ ಮಗ...' Sampark For Samarthan ವಿಷಯಕ್ಕಾಗಿ ಇಂದು ಕಿಂಗ್ ಆಫ್ ಸ್ಯಾಂಡಲ್ ವುಡ್ ಹಾಗೂ ಒಬ್ಬ ಒಳ್ಳೆಯ ವ್ಯಕ್ತಿ ಪುನೀತ್ ರಾಜ್ ಕುಮಾರ್ ರನ್ನು ಭೇಟಿ ಮಾಡಿದೆ. ಅವರ ಜೊತೆಗೆ ಪ್ರಧಾನಿ ಮೋದಿ ಅವರ ಸಾಧನೆಗಳ ಬಗ್ಗೆ ಚರ್ಚೆ ಮಾಡಿದೆ.'' ಎಂದು ತಿಳಿಸಿದ್ದಾರೆ.
ಅಂದಹಾಗೆ, ಈ ಹಿಂದೆ ಇದೇ ವಿಚಾರವಾಗಿ ಶಾಸಕ ಶ್ರೀರಾಮಲು ನಟ ಸುದೀಪ್ ರನ್ನು ಭೇಟಿ ಮಾಡಿದ್ದರು. ತಮ್ಮ ಕೇಂದ್ರ ಸರ್ಕಾರದ ಸಾಧನೆಯನ್ನು ಸುದೀಪ್ ಮೂಲಕ ಜನರಿಗೆ ತಲುಪಿಸಿದ್ದರು.