Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ಶೋಲೆ ಫಿಕ್ಸ್ :ಪ್ರಮುಖ ಪಾತ್ರದಲ್ಲಿ ದರ್ಶನ್, ರೈ
ಭಾರತೀಯ ಸಿನಿಮಾದ ಸಾರ್ವಕಾಲಿಕ ಹಿಟ್ ಚಿತ್ರ 'ಶೋಲೆ' ಕನ್ನಡಕ್ಕೆ ರಿಮೇಕ್ ಆಗುತ್ತಿರುವುದು ಖಚಿತವಾಗಿದೆ. ಈ ಚಿತ್ರದ ರೈಟ್ಸ್ ಪಡೆದಿರುವ ಆನಂದ್ ಅಪ್ಪುಗೋಳ್ ಈ ವಿಷಯವನ್ನು ಮಾಧ್ಯಮಗಳ ಮುಂದೆ ಖಚಿತ ಪಡಿಸಿದ್ದಾರೆ.
ಈ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡೇ ಮಾಡುತ್ತೇನೆ. ಇದೇ ಆಗಸ್ಟ್ 15ರಂದು ಚಿತ್ರದ ಮಹೂರ್ತ ನಡೆಯಲಿದೆ ಎಂದು ಅಪ್ಪುಗೋಳ್ ಸ್ಪಷ್ಟ ಪಡಿಸಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನೂರು ದಿನದ ಸಂಭ್ರಮದಲ್ಲಿ ಮಾತನಾಡುತ್ತಿದ್ದ ಅಪ್ಪುಗೋಳ್, ಶೋಲೆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆನ್ನುವುದು ನನ್ನ ಬಹು ದಿನದ ಕನಸು. ಸ್ವಾತಂತ್ರ್ಯದಿನದಂದು ಚಿತ್ರದ ಮಹೂರ್ತಕ್ಕೆ ಸಿದ್ದತೆ ನಡೆಸುತ್ತೇನೆ ಎಂದಿದ್ದಾರೆ.
35 ವರ್ಷದ ಹಿಂದೆ ಶೋಲೆ ಚಿತ್ರ ಬಿಡುಗಡೆಯಾದಾಗ ಸುಮಾರು 100 ಬಾರಿ ಈ ಚಿತ್ರವನ್ನು ನೋಡಿದ್ದೇನೆ. ಸಂಗೊಳ್ಳಿ ರಾಯಣ್ಣ ಚಿತ್ರದ ಯಶಸ್ಸು ಅದ್ದೂರಿಯಾಗಿ ಶೋಲೆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಲು ಸ್ಪೂರ್ತಿ ನೀಡಿದೆ.
ದರ್ಶನ್ ಮತ್ತು ಸುದೀಪ್ ನಿಜ ಜೀವನದಲ್ಲೂ ಉತ್ತಮ ಸ್ನೇಹಿತರು. ಇಬ್ಬರನ್ನೂ ಚಿತ್ರದಲ್ಲಿ ನಟಿಸುವಂತೆ ಒತ್ತಾಯಿಸುತ್ತಿದ್ದೇನೆ. ದರ್ಶನ್ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸುದೀಪ್ ಚಿತ್ರದಲ್ಲಿ ನಟಿಸಲು ಒಪ್ಪದಿದ್ದರೆ ಬೇರೆ ನಟನನ್ನು ಹುಡುಕುತ್ತೇನೆ.
ಧರ್ಮೇಂದ್ರನ ಪಾತ್ರದಲ್ಲಿ ದರ್ಶನ್ ಮತ್ತು ಅಮಿತಾಬ್ ಬಚ್ಚನ್ ಪಾತ್ರದಲ್ಲಿ ಸುದೀಪ್ ನಟಿಸಬೇಕೆನ್ನುವುದು ನನ್ನ ಆಸೆ. ಗಬ್ಬರ್ ಸಿಂಗ್ ಪಾತ್ರವನ್ನು ಪ್ರಕಾಶ್ ರೈ ಅವರ ಬಳಿ ಮಾಡಿಸಬೇಕೆಂದಿದ್ದೇನೆ ಎಂಗು ನಿರ್ಮಾಪಕ ಆನಂದ್ ಅಪ್ಪುಗೋಳ್ ಹೇಳಿದ್ದಾರೆ.
ಕಿಚ್ಚ ಸುದೀಪ್ 'ಶೋಲೆ' ಒಂದು ಲೆಜೆಂಡ್ ಚಿತ್ರ. ಅಂಥಹಾ ಚಿತ್ರವನ್ನು ರಿಮೇಕ್ ಮಾಡಲು ಹೋಗಬಾರದು ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.