Don't Miss!
- News ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಚಿತಾ ರಾಮ್ ಬಿಟ್ಟು ಹೋದ ಜಾಗ ತುಂಬಿದ 'ಯು-ಟರ್ನ್' ಬೆಡಗಿ ಶ್ರದ್ಧಾ
ಎಲ್ಲವೂ ಪ್ಲಾನ್ ಪ್ರಕಾರ ನಡೆದಿದ್ದರೆ, 'ಬ್ಲ್ಯಾಕ್ ಕೋಬ್ರಾ' ದುನಿಯಾ ವಿಜಯ್ ಹಾಗೂ 'ಡಿಂಪಲ್ ಕ್ವೀನ್' ರಚಿತಾ ರಾಮ್ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದಲ್ಲಿ ಒಟ್ಟಿಗೆ ನಟಿಸಬಹುದಿತ್ತು.
ಆದ್ರೆ, 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದಿಂದ ನಟಿ ರಚಿತಾ ರಾಮ್ ಹೊರಬಂದಿದ್ದಾರೆ. ರಚಿತಾ ರಾಮ್ ಜಾಗಕ್ಕೆ ಯಾರು ಎಂಟ್ರಿಕೊಡಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲರಲ್ಲೂ ಕಾಡುತ್ತಿತ್ತು. ಈಗ ಕಡೆಗೂ 'ಜಾನಿ'ಗೆ ನಾಯಕಿ ಸಿಕ್ಕಿದ್ದಾರೆ. ಮುಂದೆ ಓದಿರಿ...
'ಜಾನಿ'ಗೆ ನಾಯಕಿ ಆಗಲು 'ಯು-ಟರ್ನ್' ಬೆಡಗಿ ಸಿದ್ಧ
'ಜಾನಿ ಜಾನಿ ಎಸ್ ಪಪ್ಪಾ' ಚಿತ್ರಕ್ಕೆ ನಾಯಕಿ ಅಗಿ ಶ್ರದ್ಧಾ ಶ್ರೀನಾಥ್ ಅಯ್ಕೆ ಆಗಿದ್ದಾರೆ. 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದ ಮೂಲಕ ಮೊದಲ ಬಾರಿಗೆ ದುನಿಯಾ ವಿಜಯ್ ಗೆ ಜೋಡಿ ಆಗಲಿದ್ದಾರೆ ಶ್ರದ್ಧಾ ಶ್ರೀನಾಥ್.
ಮತ್ತೆ 'ಜಾನಿ' ಜಪ ಮಾಡಲು ಆರಂಭಿಸಿದ ದುನಿಯಾ ವಿಜಯ್-ಪ್ರೀತಂ ಗುಬ್ಬಿ
ರಮ್ಯಾ ಜಾಗವನ್ನ ಯಾರೂ ತುಂಬಲು ಸಾಧ್ಯ ಇಲ್ಲ.!
'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾ 'ಜಾನಿ ಮೇರಾ ನಾಮ್' ಚಿತ್ರದ ಮುಂದುವರಿದ ಭಾಗವಾಗಿದ್ದು, 'ಜಾನಿ ಮೇರಾ ನಾಮ್' ಸಿನಿಮಾದಲ್ಲಿ ದುನಿಯಾ ವಿಜಯ್ ಗೆ ರಮ್ಯಾ ಜೋಡಿಯಾಗಿದ್ದರು. ರಾಜಕೀಯದಲ್ಲಿ ಸಕ್ರಿಯರಾಗಿರುವ ರಮ್ಯಾ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ''ರಮ್ಯಾ ಜಾಗವನ್ನು ಯಾರಿಂದಲೂ ತುಂಬಲು ಸಾಧ್ಯ ಇಲ್ಲ. ಅದ್ರೆ, ಶ್ರದ್ಧಾ ಶ್ರೀನಾಥ್ ಕೂಡ ಉತ್ತಮ ನಟಿ. ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ'' ಎನ್ನುತ್ತಾರೆ ನಿರ್ದೇಶಕ ಪ್ರೀತಂ ಗುಬ್ಬಿ.
ಮೋಹಕ ತಾರೆ ರಮ್ಯಾ ಜಾಗಕ್ಕೆ ರಚಿತಾ ರಾಮ್ ಎಂಟ್ರಿ!
ರಚಿತಾ ರಾಮ್ ಹೊರಬಂದಿದ್ದು ಯಾಕೆ.?
ಡೇಟ್ಸ್ ಹೊಂದಾಣಿಕೆ ಆಗದ ಕಾರಣ 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾದಿಂದ ರಚಿತಾ ರಾಮ್ ಹೊರಬಂದಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡರೂ, ಗಾಂಧಿನಗರದಲ್ಲಿ ಹರಿದಾಡುತ್ತಿರುವ ಸುದ್ದಿಯೇ ಬೇರೆ.!
ನಟ ದುನಿಯಾ ವಿಜಯ್ ಮೇಲೆ ಏನಿದು ಹೊಸ ಅಪವಾದ.?
ಹತ್ತು ಕೆ.ಜಿ ತೂಕ ಇಳಿಸಬೇಕು ದುನಿಯಾ ವಿಜಯ್
'ಜಾನಿ' ಪಾತ್ರಕ್ಕಾಗಿ ದುನಿಯಾ ವಿಜಯ್ ಹತ್ತು ಕೆ.ಜಿ ತೂಕ ಇಳಿಸಿ ತೆಳ್ಳಗಾಗಬೇಕಾಗಿದೆ. ಪಾತ್ರಕ್ಕಾಗಿ ಈಗಾಗಲೇ ತಯಾರಿಯಲ್ಲಿ ತೊಡಗಿದ್ದಾರೆ ನಟ ದುನಿಯಾ ವಿಜಯ್.
ದುನಿಯಾ ವಿಜಯ್ ಚಿತ್ರದಿಂದ ರಚಿತಾ ರಾಮ್ ಹೊರ ಬಂದಿದ್ದೇಕೆ?
ರೆಡಿಯಾಗುತ್ತಿದೆ ಅದ್ಭುತ ಸೆಟ್
'ಜಾನಿ ಜಾನಿ ಎಸ್ ಪಪ್ಪಾ' ಚಿತ್ರಕ್ಕಾಗಿ ಹತ್ತು ಎಕರೆ ಜಾಗದಲ್ಲಿ 'ಕಾಲೋನಿ'ಯೊಂದರ ಸೆಟ್ ಹಾಕಲಾಗುತ್ತಿದೆ. 'ಜಾನಿ ಮೇರಾ ನಾಮ್' ಚಿತ್ರದಲ್ಲಿ ನಟಿಸಿದ್ದ ಬಹುತೇಕ ಕಲಾವಿದರ ದಂಡು 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾದಲ್ಲಿ ಇರಲಿದೆ.