Don't Miss!
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರವಣ್ ರಿಗ್ರೇಟ್ ಅಯ್ಯರ್ ಗೆ ಫಾಲ್ಕೆ ಪುರಸ್ಕಾರ
ರಾಮನಗರದ ಬುಡಕಟ್ಟು ಜನಾಂಗ ಇರುಳಿಗರ ಜೀವನಶೈಲಿ ಬಗ್ಗೆ ಹೇಳುವ ಮೊಬೈಲ್ ಸಾಕ್ಷ್ಯಚಿತ್ರಕ್ಕೆ ಮೊಬೈಲ್ ವಿಭಾಗದ ಅತ್ಯುತ್ತಮ ಚಿತ್ರ ಎಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಆದರೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೋಯಿಡಾದಲ್ಲಿ ನಡೆದಿದ್ದರಿಂದ ಶ್ರವ್ಪಣ್ ಅವರು ನೇರವಾಗಿ ಕಾರ್ಯಕ್ರಮಕ್ಕೆ ಹೋಗಲಾಗಲಿಲ್ಲವಂತೆ. ಆದರೆ, ನೂರಾರು ದೇಶಗಳ ಸಾಕ್ಷ್ಯಚಿತ್ರಗಳ ನಡುವೆ ಸ್ಪರ್ಧಿಸಿ 'ಕತ್ತಲಲ್ಲಿ ಇರುಳಿಗರು' ಪ್ರಶಸ್ತಿ ಗಳಿಸಿರುವುದು ಖುಷಿಕೊಟ್ಟಿದೆ ಎಂದು ಶ್ರವಣ್ ಹೇಳಿದ್ದಾರೆ.
21 ವರ್ಷದ ಪತ್ರಿಕೋದ್ಯಮದ ವಿದ್ಯಾರ್ಥಿ ಶ್ರವಣ್ ರಿಗ್ರೆಟ್ ಅಯ್ಯರ್ ಭಾರತೀಯ ಚಿತ್ರರಂಗದಲ್ಲಿ ಈ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಚಿಕ್ಕಂದಿನಿಂದಲೇ ಜಗತ್ತನ್ನು ಬೆರಗು ಗಣ್ಣಿನಿಂದ ನೋಡುತ್ತಾ, ವಿಭಿನ್ನ ದೃಷ್ಟಿಕೋನದಲ್ಲಿ ಯೋಚಿಸುವ ಹವ್ಯಾಸ ಬೆಳೆಸಿಕೊಂಡು ಚಿತ್ರಗಳನ್ನು ತೆಗೆಯುತ್ತಿದ್ದ ಶ್ರವಣನಿಗೆ ಆ ಫೋಟೋಗ್ರಫಿ ಹವ್ಯಾಸವೇ "ಸ್ಟಾಪ್-ಮೋಶನ್"ಸಾಕ್ಷ್ಯಚಿತ್ರ ತೆಗೆಯಲು ಪ್ರೇರಣೆ ನೀಡಿತಂತೆ.
ನೋಕಿಯಾ- N8 ಮೊಬೈಲ್ ಬಳಸಿ ತೆಗೆದ ಮತ್ತೊಂದು ಸಾಕ್ಷ್ಯ ಚಿತ್ರ - "ರೆಕ್ಕೆ ಮುರಿದ ಹಕ್ಕಿ ನಾನು". ಬಗ್ಗೆ ಈಗಾಗಲೇ ನಮ್ಮ Gizbot ವಿಭಾಗದಲ್ಲಿ ವಿವರವಾಗಿ ಬರೆದಿದ್ದೆವು. [ಲೇಖನ ಓದಿ] ಈಗ ಅದಕ್ಕಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಶ್ರವಣ್, ಜರ್ಮನಿ, ಫ್ರಾನ್ಸ್, ಸ್ಪೇನ್ ಸೇರಿದಂತೆ ನೂರಾರು ದೇಶದ ಪ್ರತಿಭಾವಂತರನ್ನು ಮಣಿಸಿ ಪ್ರತಿಷ್ಠಿತ ಪ್ರಶಸ್ತಿ ಗಳಿಸಿ ನಾಡೀಗೆ ಹೆಮ್ಮೆ ಎನಿಸಿದ್ದಾರೆ.
ರಾಜ್ಯದ ಎಲ್ಲಾ ಆದಿವಾಸಿಗಳ ಬಗ್ಗೆ ಸಾಕ್ಷ್ಯಚಿತ್ರ ತೆಗೆಯಬೇಕು. ಅವರ ಜೀವನಶೈಲಿ ಸಾರ್ವಜನಿಕರಿಗೆ ಪರಿಚಯವಾಗಬೇಕು. ಬುಡಕಟ್ಟು ಜನಾಂಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು ಎಂಬ ಮಹದಾಸೆ ಕೂಡಾ ಶ್ರವಣ್ ಗೆ ಇದೆ. ಶ್ರವಣ್ ತೆಗೆದ ಇರುಳಿಗರ ಬದುಕಿನ ಕಥೆ ಸಾಕ್ಷ್ಯಚಿತ್ರ ನೋಡಿ