Don't Miss!
- News
ಸುಳ್ಳು ಭರವಸೆ ಕೊಟ್ಟು ಜನರನ್ನು ದಾರಿತಪ್ಪಿಸುವ ಕೆಲಸ; ಎಲ್ಲಾ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ: ಸಿಎಂ
- Automobiles
ಜನಪ್ರಿಯ ನಟನ ಮನೆಗೆ ಕಥೆ ಹೇಳಲು ಹೋಗಿ ಆತನ ದುಬಾರಿ ಕಾರ್ ಓಡಿಸಿಬಂದ ನಿರ್ದೇಶಕ...
- Sports
ಮೂಲೆಗುಂಪಾದ ಶಿಖರ್ ಧವನ್ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ: ಇಶಾನ್, ಗಿಲ್ ಬಗ್ಗೆ ಹೇಳಿದ್ದೇನು?
- Technology
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಪವರ್ ಸ್ಟಾರ್' ಆಗಿ ಮಲಯಾಳಂಗೆ ಕಾಲಿಟ್ಟ ಕೆ.ಮಂಜು ಪುತ್ರ ಶ್ರೇಯಸ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ಹೊಸ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಪಡ್ಡೆ ಹುಲಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ, ಶ್ರೇಯಸ್ ಸದ್ಯ ವಿಷ್ಣು ಪ್ರಿಯಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಈ ಸಿನಿಮಾ ರಿಲೀಸ್ ಆಗುವ ಮೊದಲೇ ಶ್ರೇಯಸ್ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸ್ಯಾಂಡಲ್ ವುಡ್ ನಿಂದ ಮಾಲಿವುಡ್ ಗೆ ಜಿಗಿದಿದ್ದಾರೆ. ಹೌದು, ಶ್ರೇಯಸ್ ಇದೀಗ ಮಲಯಾಳಂ ಸಿನಿಮಾರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
ಈಗಾಗಲೇ ಚಿತ್ರದ ಬಗ್ಗೆ ಮಾತುಕತೆ ನಡೆದಿದ್ದು, ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಅಂದಹಾಗೆ ಶ್ರೇಯಸ್ ಮೊದಲ ಮಲಯಾಳಂ ಚಿತ್ರಕ್ಕೆ 'ಒರು ಆಡಾರ್ ಲವ್' ಖ್ಯಾತಿಯ ನಿರ್ದೇಶಕ ಓಮರ್ ಲುಲು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ 'ಪವರ್ ಸ್ಟಾರ್' ಎಂದು ಟೈಟಲ್ ಇಡಲಾಗಿದೆ.
ನಿರ್ದೇಶಕ ಓಮರ್, 'ಒರು ಆಡಾರ್ ಲವ್' ಸಿನಿಮಾ ಮೂಲಕ ದೇಶದಾದ್ಯಂತ ಸದ್ದು ಮಾಡಿದ್ದರು. ಅಲ್ಲದೆ ಈ ಸಿನಿಮಾ ಮೂಲಕ ಕಣ್ಸನ್ನೆಯ ಸುಂದರಿ ಪ್ರಿಯ ವಾರಿಯರ್ ಅವರನ್ನು ಪರಿಚಯಿಸಿದ್ದು ಇದೇ ನಿರ್ದೇಶಕ. ಇದೀಗ ಓಮರ್ ಕನ್ನಡದ ನಟ ಶ್ರೇಯಸ್ ಜೊತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ.
ಅಂದಹಾಗೆ 'ಪವರ್ ಸ್ಟಾರ್' ಸಿನಿಮಾ ಮಲಯಾಳಂ ಜೊತೆಗೆ ಕನ್ನಡದಲ್ಲೂ ತಯಾರಾಗುತ್ತಿದೆ. ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಶ್ರೇಯಸ್ ಈ ಸಿನಿಮಾದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ.
Recommended Video
ಅಂದಹಾಗೆ ಒರು ಆಡಾರ್ ಲವ್ ಸಿನಿಮಾ ಮೂಲಕ ದೇಶದಾದ್ಯಂತ ಸಂಚಲನ ಮೂಡಿಸಿದ್ದ ನಟಿ ಪ್ರಿಯ ವಾರಿಯರ್ ಸದ್ಯ ಶ್ರೇಯಸ್ ಜೊತೆ ವಿಷ್ಣುಪ್ರಿಯಾ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ ಕನ್ನಡದ ಮೊದಲ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.