Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪವರ್ ಸ್ಟಾರ್' ಆಗಿ ಮಲಯಾಳಂಗೆ ಕಾಲಿಟ್ಟ ಕೆ.ಮಂಜು ಪುತ್ರ ಶ್ರೇಯಸ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ಹೊಸ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಪಡ್ಡೆ ಹುಲಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ, ಶ್ರೇಯಸ್ ಸದ್ಯ ವಿಷ್ಣು ಪ್ರಿಯಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಈ ಸಿನಿಮಾ ರಿಲೀಸ್ ಆಗುವ ಮೊದಲೇ ಶ್ರೇಯಸ್ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸ್ಯಾಂಡಲ್ ವುಡ್ ನಿಂದ ಮಾಲಿವುಡ್ ಗೆ ಜಿಗಿದಿದ್ದಾರೆ. ಹೌದು, ಶ್ರೇಯಸ್ ಇದೀಗ ಮಲಯಾಳಂ ಸಿನಿಮಾರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
ಈಗಾಗಲೇ ಚಿತ್ರದ ಬಗ್ಗೆ ಮಾತುಕತೆ ನಡೆದಿದ್ದು, ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಅಂದಹಾಗೆ ಶ್ರೇಯಸ್ ಮೊದಲ ಮಲಯಾಳಂ ಚಿತ್ರಕ್ಕೆ 'ಒರು ಆಡಾರ್ ಲವ್' ಖ್ಯಾತಿಯ ನಿರ್ದೇಶಕ ಓಮರ್ ಲುಲು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ 'ಪವರ್ ಸ್ಟಾರ್' ಎಂದು ಟೈಟಲ್ ಇಡಲಾಗಿದೆ.
ನಿರ್ದೇಶಕ ಓಮರ್, 'ಒರು ಆಡಾರ್ ಲವ್' ಸಿನಿಮಾ ಮೂಲಕ ದೇಶದಾದ್ಯಂತ ಸದ್ದು ಮಾಡಿದ್ದರು. ಅಲ್ಲದೆ ಈ ಸಿನಿಮಾ ಮೂಲಕ ಕಣ್ಸನ್ನೆಯ ಸುಂದರಿ ಪ್ರಿಯ ವಾರಿಯರ್ ಅವರನ್ನು ಪರಿಚಯಿಸಿದ್ದು ಇದೇ ನಿರ್ದೇಶಕ. ಇದೀಗ ಓಮರ್ ಕನ್ನಡದ ನಟ ಶ್ರೇಯಸ್ ಜೊತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ.
ಅಂದಹಾಗೆ 'ಪವರ್ ಸ್ಟಾರ್' ಸಿನಿಮಾ ಮಲಯಾಳಂ ಜೊತೆಗೆ ಕನ್ನಡದಲ್ಲೂ ತಯಾರಾಗುತ್ತಿದೆ. ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಶ್ರೇಯಸ್ ಈ ಸಿನಿಮಾದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ.
Recommended Video
ಅಂದಹಾಗೆ ಒರು ಆಡಾರ್ ಲವ್ ಸಿನಿಮಾ ಮೂಲಕ ದೇಶದಾದ್ಯಂತ ಸಂಚಲನ ಮೂಡಿಸಿದ್ದ ನಟಿ ಪ್ರಿಯ ವಾರಿಯರ್ ಸದ್ಯ ಶ್ರೇಯಸ್ ಜೊತೆ ವಿಷ್ಣುಪ್ರಿಯಾ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ ಕನ್ನಡದ ಮೊದಲ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.