Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಬರಿ ಕೇಸ್ ಬೆನ್ನು ಹತ್ತಿ 'ರಹದಾರಿ'ಯಲ್ಲಿ ಬಂದ್ರು ಶ್ವೇತಾ ಶ್ರೀವಾತ್ಸವ್
ನಟಿ ಶ್ವೇತಾ ಶ್ರೀವಾತ್ಸವ್ ಕೆಲ ವರ್ಷಗಳಿಂದ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದರು. ಆದರೆ, ರಾಬರಿ ಕೇಸ್ ಹಿಡಿಯಲು 'ರಹದಾರಿ' ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದಿದ್ದಾರೆ.
ತಾಯಿ ಆದ ನಂತರ ಬಿಡುವು ತೆಗೆದುಕೊಂಡಿದ್ದ, ಶ್ವೇತಾ ಶ್ರೀವಾತ್ಸವ್ ಮೂರು ವರ್ಷಗಳ ನಂತರ ಮತ್ತೆ ಸಿನಿಮಾ ಮಾಡುತ್ತಿದ್ದಾರೆ. ಈ ಬಾರಿ ಯುವ ಹಾಗೂ ಪ್ರತಿಭಾವಂತ ನಿರ್ದೇಶಕನ ಚಿತ್ರದಲ್ಲಿ ಶ್ವೇತ ಶ್ರೀವತ್ಸವ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಅಂದರೆ, ಪೊಲೀಸ್ ಅಧಿಕಾರಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
2ನೇ ಚಿತ್ರಕ್ಕೆ ಮೊದಲೇ 3ನೇ ಚಿತ್ರ ಅನೌನ್ಸ್ ಮಾಡಿದ ನಿರ್ದೇಶಕ ಗಿರೀಶ್
ಶ್ವೇತಾ ಶ್ರೀವಾತ್ಸವ್ ಕಡಿಮೆ ಸಿನಿಮಾ ಮಾಡಿದ್ದರೂ, ಶಕ್ತಿಯುತ ಪಾತ್ರಗಳನ್ನು ಆರಿಸಿಕೊಂಡಿದ್ದಾರೆ. ಇದೀಗ 'ರಹದಾರಿ'ಯಲ್ಲಿ ಮತ್ತೊಮ್ಮೆ ಸವಾಲಿನ ಪಾತ್ರವನ್ನು ಸ್ವೀಕರಿಸಿದ್ದಾರೆ. ಗಿರೀಶ್ ವೈರಮುಡಿ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ 'ಒಂದ್ ಕಥೆ ಹೇಳ್ಲಾ' ಚಿತ್ರವನ್ನು ಗಿರೀಶ್ ನಿರ್ದೇಶನ ಮಾಡಿದ್ದರು.
ಗಿರೀಶ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ. ಎರಡನೇ ಸಿನಿಮಾಗೆ ಮೊದಲೇ ಈ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಹೆಚ್ಚು ಇರುವ ಕಾರಣ 'ರಹದಾರಿ' ಚಿತ್ರ ಮೊದಲು ಶುರು ಮಾಡಿದ್ದಾರೆ. ಮುಕ್ತಾಂಬ ಬಸವರಾಜು ಹಾಗೂ ಮಂಜುನಾಥ್ ಶಾಮನೂರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಣದ ಬಕ್ಕೇಶ್ ಹಾಗೂ ಕೆ ಸಿ ರಾವ್ ಸಂಗೀತ ನೀಡುತ್ತಿದ್ದಾರೆ.
ಅಂದಹಾಗೆ, ಈ ಸಿನಿಮಾ ಒಂದು ನೈಜ ಘಟನೆ ಆಧಾರವಾಗಿ ಇಟ್ಟುಕೊಂಡು ಮಾಡಲಾಗಿದೆ. ಸಖತ್ ಕ್ರೇಜಿಯಾದ ರಾಬರಿಯ ಕಥೆ ಚಿತ್ರದಲ್ಲಿ ಇರಲಿದೆಯಂತೆ. ಇದೊಂದು ಕುತೂಹಲಕಾರಿ ಘಟನೆಯಾಗಿದ್ದು, ಎಲ್ಲೂ ಹೆಚ್ಚು ಬೆಳಕಿಗೆ ಬಂದಿಲ್ಲ ಎನ್ನುತ್ತಾರೆ ಗಿರೀಶ್.