Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಜೆಟ್ ನಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಸಿಹಿಕಹಿ ಕೊಡುಗೆ
ಈ ಬಾರಿ ಸಿದ್ದರಾಮಯ್ಯ ಮಂಡಿಸಿದ ಮುಂಗಡಪತ್ರದಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಒಂದಷ್ಟು ಸಿಹಿ ಇನ್ನೊಂದಿಷ್ಟು ಕಹಿ ಕೊಡುಗೆಯನ್ನು ನೀಡಿದ್ದಾರೆ. ಮೊದಲು ಕಹಿ ಬಳಿಕ ಸಿಹಿ ಬಗ್ಗೆ ತಿಳಿದುಕೊಳ್ಳೋಣ. ಸಿನಿಮಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಮೂಲಕ ಚಿತ್ರರಸಿಕರ ಕಿಸೆಗೆ ಒಂದಷ್ಟು ಹೊರೆ ಬಿದ್ದಿದೆ.
ಹವಾನಿಯಂತ್ರಣ ವ್ಯವಸ್ಥೆ ಇರುವ ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ ರು.3 ಹೆಚ್ಚಳ ಹಾಗೂ ನಾನ್ ಎಸಿ ಚಿತ್ರಮಂದಿರಗಳಲ್ಲಿ ರು.2 ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಸರಿಸುಮಾರು 100 ಹಾಗೂ ರಾಜ್ಯದಾದ್ಯಂತ 600ಕ್ಕೂ ಹೆಚ್ಚು ಚಿತ್ರಮಂದಿರಳಿವೆ.
ಬೆಂಗಳೂರು ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಿಸುತ್ತಿರುವ ದಿವಂಗತ ಡಾ.ರಾಜ್ ಕುಮಾರ್ ಸ್ಮಾರದ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು ಇದನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು.
ದಿವಂಗತ ಡಾ.ವಿಷ್ಣುವರ್ಧನ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು ಇದರ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು.
ಕನ್ನಡ ವಾಕ್ ಚಲನಚಿತ್ರವು 75 ವರ್ಷಗಳನ್ನು ಪೂರೈಸಿರುವ ನೆನಪಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಅಮೃತಮಹೋತ್ಸವ ಭವನದ ಬಾಕಿ ಕಾಮಗಾರಿಗಳನ್ನು ಪೂರೈಸಲು ಅನುಕೂಲವಾಗುವಂತೆ ರು.2.50 ಕೋಟಿ ಅನುದಾನ ಒದಗಿಸಲಾಗುವುದು. (ಒನ್ಇಂಡಿಯಾ ಕನ್ನಡ)