Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಜೆಟ್ ನಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಸಿಹಿಕಹಿ ಕೊಡುಗೆ
ಈ ಬಾರಿ ಸಿದ್ದರಾಮಯ್ಯ ಮಂಡಿಸಿದ ಮುಂಗಡಪತ್ರದಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಒಂದಷ್ಟು ಸಿಹಿ ಇನ್ನೊಂದಿಷ್ಟು ಕಹಿ ಕೊಡುಗೆಯನ್ನು ನೀಡಿದ್ದಾರೆ. ಮೊದಲು ಕಹಿ ಬಳಿಕ ಸಿಹಿ ಬಗ್ಗೆ ತಿಳಿದುಕೊಳ್ಳೋಣ. ಸಿನಿಮಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಮೂಲಕ ಚಿತ್ರರಸಿಕರ ಕಿಸೆಗೆ ಒಂದಷ್ಟು ಹೊರೆ ಬಿದ್ದಿದೆ.
ಹವಾನಿಯಂತ್ರಣ ವ್ಯವಸ್ಥೆ ಇರುವ ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ ರು.3 ಹೆಚ್ಚಳ ಹಾಗೂ ನಾನ್ ಎಸಿ ಚಿತ್ರಮಂದಿರಗಳಲ್ಲಿ ರು.2 ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಸರಿಸುಮಾರು 100 ಹಾಗೂ ರಾಜ್ಯದಾದ್ಯಂತ 600ಕ್ಕೂ ಹೆಚ್ಚು ಚಿತ್ರಮಂದಿರಳಿವೆ.
ಬೆಂಗಳೂರು ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಿಸುತ್ತಿರುವ ದಿವಂಗತ ಡಾ.ರಾಜ್ ಕುಮಾರ್ ಸ್ಮಾರದ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು ಇದನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು.
ದಿವಂಗತ ಡಾ.ವಿಷ್ಣುವರ್ಧನ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು ಇದರ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು.
ಕನ್ನಡ ವಾಕ್ ಚಲನಚಿತ್ರವು 75 ವರ್ಷಗಳನ್ನು ಪೂರೈಸಿರುವ ನೆನಪಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಅಮೃತಮಹೋತ್ಸವ ಭವನದ ಬಾಕಿ ಕಾಮಗಾರಿಗಳನ್ನು ಪೂರೈಸಲು ಅನುಕೂಲವಾಗುವಂತೆ ರು.2.50 ಕೋಟಿ ಅನುದಾನ ಒದಗಿಸಲಾಗುವುದು. (ಒನ್ಇಂಡಿಯಾ ಕನ್ನಡ)