Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಿಎನ್ ಸೀತಾರಾಮ್ ಮಹಾಪರ್ವ ಸಂವಾದದಲ್ಲಿ ಸಿದ್ದು
ಗೌರಿಬಿದನೂರು ಸೀತಾರಾಮ್ ಅವರ ಹೊಸ ಧಾರಾವಾಹಿ 'ಮಹಾಪರ್ವ' ಶೀಘ್ರದಲ್ಲೇ ಈಟಿವಿ ಕನ್ನಡ ವಾಹಿನಿಯಲ್ಲಿ ಮೂಡಿಬರಲಿದೆ. ಈ ಹಿನ್ನೆಲೆಯಲ್ಲಿ ಧಾರಾವಾಹಿ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶನಿವಾರ (ಜೂ.15) ಸಂಜೆ 6ಗಂಟೆಗೆ ಸಂವಾದ ಕಾರ್ಯಕ್ರಮ ಆರಂಭ. ಈ ಸಂವಾದದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪಾಲ್ಗೊಳ್ಳುತ್ತಿರುವುದು. ಸೀತಾರಾಮ್ ಧಾರಾವಾಹಿಗಳಲ್ಲಿ ಮುಖ್ಯಮಂತ್ರಿ ಪಾತ್ರಗಳನ್ನು ಪೋಷಿಸಿರುವ ಕಲಾವಿದರು ಸಿದ್ದರಾಮಯ್ಯ ಅವರಿಗೆ ಪ್ರಶ್ನೆಗಳನ್ನು ಕೇಳಲಿದ್ದಾರೆ.
ಸೀತಾರಾಮ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂವಾದದ ಕಂತನ್ನು 'ಮಹಾಪರ್ವ' ಧಾರಾವಾಹಿ ಪ್ರಸಾರಕ್ಕೂ ಮುನ್ನ ಈಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಜುಲೈ.1ರಿಂದ ರಾತ್ರಿ 9.30 ಕ್ಕೆ ಮಹಾಪರ್ವ ಈಟಿವಿ ಕನ್ನಡ ವಾಹಿನಿಯಲ್ಲಿ ಮೂಡಿಬರಲಿದೆ.
ನಾಲ್ಕು ಯಶಸ್ವಿ ಧಾರಾವಾಹಿಗಳನ್ನು ಕೊಟ್ಟ ನಂತರ ಈ ಮಹಾಪರ್ವದ ಬಗ್ಗೆ ಜನರು ಅಪಾರ ನಂಬಿಕೆಯಿಟ್ಟುಕೊಂಡಿರುತ್ತಾರೆ. ಅವರ ನಿರೀಕ್ಷೆಯನ್ನು ಕಂಡು ಒಂದು ಕ್ಷಣ ಭಯವಾಗುತ್ತಿದೆ. ಹಿಂದಿನ ಧಾರಾವಾಹಿಗಳಲ್ಲಿ ನಟಿಸಿದ ಕಲಾವಿದರನ್ನು ಬಿಟ್ಟು ಹೊಸ ಪ್ರತಿಭೆಗಳಿಗೆ ಈ ಧಾರಾವಾಹಿಯಲ್ಲಿ ಅವಕಾಶ ನೀಡುತ್ತಿದ್ದೇನೆ. ವೈರುಧ್ಯಗಳ ನಡುವೆ ಬದುಕುತ್ತಿರುವ ಮನುಷ್ಯನ ಜೀವನ ಕುರಿತಾಗಿ ಈ ಧಾರಾವಾಹಿ ಮೂಡಿಬರಲಿದೆ ಎಂದು ನಿರ್ದೇಶಕ ಟಿ.ಎನ್.ಸೀತಾರಾಂ ತಿಳಿಸಿದರು. (ಒನ್ಇಂಡಿಯಾ ಕನ್ನಡ)