Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಘನಾ ರಾಜ್ ಮನೆಗೆ ತೆರಳಿ ಧೈರ್ಯ ತುಂಬಿದ ಸಿದ್ಧರಾಮಯ್ಯ ಸೊಸೆ
ನಟ ಚಿರಂಜೀವಿ ಸರ್ಜಾ ಇನ್ನೂ ನೆನಪು ಮಾತ್ರ. ಚಿರು ಕಳೆದುಕೊಂಡ ನೋವು ಅವರ ಕುಟುಂಬ ಮತ್ತು ಅಭಿಮಾನಿಗಳಲ್ಲಿ ಇನ್ನೂ ಮಾಸಿಲ್ಲ. ಚಿರು ಅಗಲಿಕೆಯ ಆಘಾತದಿಂದ ಹೊರಬರಲು ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ. ಚಿರು ನೆನಪು ಅವರನ್ನು ಸದಾ ಕಾಡುತ್ತಿದೆ. ಅದೆ ನೆನಪಿನಲ್ಲೆ ದಿನಕಳೆಯುತ್ತಿದೆ ಸರ್ಜಾ ಕುಟುಂಬ.
Recommended Video
ಚಿರು ಪತ್ನಿ ಮೇಘನಾ ರಾಜ್ ನೋಡಿದ್ರೆ ನಿಜಕ್ಕು ಕರಳು ಹಿಂಡುತ್ತೆ. ಪತಿ ಚಿರು ನೆನಪಲ್ಲೆ ದಿನ ದೂಡುತ್ತಿರುವ ಮೆಘನಾಗೆ ಅನೇಕರು ಧೈರ್ಯ ತುಂಬುತ್ತಿದ್ದಾರೆ. ಚಿತ್ರರಂಗದ ಗಣ್ಯರು, ಸ್ನೇಹಿತರು ಮನೆಗೆ ಭೇಟಿ ಸಾಂತ್ವನ ಹೇಳುತ್ತಿದ್ದಾರೆ. ಇದೀಗ ಮಾಡಿ ಸಿಎಂ ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಮೇಘನಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಮುಂದೆ ಓದಿ..
ಚಿರಂಜೀವಿ ನೆನಪಲ್ಲಿ ಹೆಸರು ಬದಲಿಸಿಕೊಂಡ ಮೇಘನಾ ರಾಜ್
ಮೇಘನಾ ರಾಜ್ ಭೇಟಿಯಾದ ಸ್ಮಿತಾ ರಾಕೇಶ್
ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ಆದರೆ ಮೊದಲ ಬಾರಿಗೆ ಮೇಘನಾ ಮನೆಯಲ್ಲಿ ಕಾಣಿಸಿಕೊಂಡು, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಮೇಘನಾ ರಾಜ್ ಕುಟುಂಬ ಮತ್ತು ಸಿದ್ದರಾಮಯ್ಯನವರ ಕುಟುಂಬದ ನಡುವೆ ಉತ್ತಮ ಒಡನಾಟವಿದೆ. ಇದೆ ಸ್ನೇಹದ ಕಾರಣ ಸ್ಮಿತಾ, ಮೇಘನಾ ಮನೆಗೆ ಭೇಟಿ ನೀಡಿ ಮೇಘನಾ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಕೆಲ ಹೊತ್ತು ಮೇಘನಾ ಜೊತೆ ಸಮಯಕಳೆದಿದ್ದಾರೆ.
ಸ್ಮಿತಾ ಜೊತೆ ಮೇಘನಾ ಮನೆಗೆ ತೆರಳಿದ ಪ್ರಥಮ್
ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ಜೊತೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಕೂಡ ಮೇಘನಾ ಮನೆಗೆ ತೆರಳಿದ್ದಾರೆ. ಮೇಘನಾ ಅವರಿಗೆ ಧೈರ್ಯ ತುಂಬಿ ಕುಟುಂಬದ ಜೊತೆ ಮಾತನಾಡಿ, ಆರೋಗ್ಯ ವಿಚಾರಿಸಿದ್ದಾರೆ. ಮೇಘನಾ ಮನೆಗೆ ಭೇಟಿ ನೀಡಿದ ಫೋಟೋವನ್ನು ಪ್ರಥಮ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಚಿರಂಜೀವಿ ಸರ್ಜಾಗೆ ಹಂಸಲೇಖ ಭಾವಪೂರ್ಣ ನಾದನಮನ
ಪ್ರಥಮ್ ಪೋಸ್ಟ್
"ಭೇಟಿಯ ಬಗ್ಗೆ ಅನಾವಶ್ಯಕ ಕಲ್ಪನೆ ಬೇಡ. ಒಂದು ವಿಶೇಷ ಮನವಿ. ಸಂಬಂಧವೇ ಇರದ ಗಾಸಿಪ್ ಗಳು, ಇಲ್ಲಸಲ್ಲದ ವಿಚಾರ ಯೂಟ್ಯೂಬ್ ನಲ್ಲಿ ಹಾಕೋ ಮುಂಚೆ ಒಂದು ಸಲ ಮೇಘನಾ ರಾಜ್ ಬಗ್ಗೆ ಯೋಚಿಸಿ. ಮೇಘನಾ ಅವರ ಭಾವನೆಗಳನ್ನು ಗೌರವಿಸಿ. ಎಲ್ಲಿಯೂ ಮಾತನಾಡದ ಸ್ಮಿತಾ ಮೇಡಮ್ ಬಹಳಷ್ಟು ವಿಚಾರಗಳನ್ನು ಅಕ್ಕನ ಜಾಗದಲ್ಲಿ ನಿಂತು ಮೇಘನಾರ ಜೊತೆ ಮಾತನಾಡಿದ್ದಾರೆ. ಮಗುವಿನ ಬಗ್ಗೆ ಬಹಳಷ್ಟು ಕನಸು ಕಂಡಿದ್ದಾರೆ. ಅವರ ಎಲ್ಲಾ ಆಸೆಗಳು ಈಡೇರಲೆಂದು ಸ್ವಚ್ಚ ಮನಸ್ಸಿನಿಂದ ಹಾರೈಸೋಣ" ಎಂದು ಪ್ರಥಮ್ ಫೋಟೋ ಶೇರ್ ದೀರ್ಘವಾಗಿ ಬರೆದುಕೊಂಡಿದ್ದಾರೆ.
ಅತ್ತಾಗ ಹೆಗಲು ಕೊಟ್ಟವರಿಗೆ ಕೈ ಮುಗಿದ ಚಿರು ಪತ್ನಿ ಮೇಘನಾ ರಾಜ್
ಮೇಘನಾ ಭೇಟಿಯಾಗಿ ಧೈರ್ಯ ತುಂಬಿದ್ದ ರಾಘಣ್ಣ
ಇತ್ತೀಚಿಗೆ ರಾಜ್ ಕುಟುಂಬ ಸಹ ಸರ್ಜಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಸರ್ಜಾ ಮನೆಗೆ ಮತ್ತು ಸುಂದರ್ ರಾಜ್ ಮನೆಗೂ ಭೇಟಿ ನೀಡಿದ್ದರು. ಸುಂದರ್ ರಾಜ್, ಪ್ರಮಿಳಾ ಜೋಷಾಯ್ ಮತ್ತು ಮಗಳು ಮೇಘನಾ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದರು. ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದ್ದರು.